ಮಂಗಳೂರು: ಅಖಿಲ ಭಾರತ ಗೃಹರಕ್ಷಕದಳದ 61ನೇ ಉತ್ತಾನ ದಿನಾಚರಣೆಯನ್ನು ಡಿ.08 ಶುಕ್ರವಾರದಂದು ಬೆಳಿಗ್ಗೆ 11:00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್, ಮಂಗಳೂರಿನಲ್ಲಿ ಆಚರಿಸಲಾಗುತ್ತದೆ.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಅನುಪಮ್ ಅಗ್ರವಾಲ್ IPS ಪೊಲೀಸ್ ಆಯುಕ್ತರು ಮಂಗಳೂರು ನಗರ ಹಾಗೂ ಡಾ|| ಮಹಾಬಲೇಶ್ ಶೆಟ್ಟಿ ಫೊರೆನ್ಸಿಕ್ ವಿಭಾಗ ಮುಖ್ಯಸ್ಥ ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ನಿಟ್ಟೆ ವಿಶ್ವವಿದ್ಯಾಲಯ ಇವರು ಆಗಮಿಸಲಿದ್ದಾರೆ.
ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ, ಎಲ್ಲಾ ಗೃಹರಕ್ಷಕ, ಗೃಹರಕ್ಷಕಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ