ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಐದನೇ ದಿನ ಗೌರಿ ಮಾರುಕಟ್ಟೆ ಉತ್ಸವವು ಲಕ್ಷಾಂತರ ಭಕ್ತ ಸಮೂಹದಲ್ಲಿ ವಿದ್ಯುಕ್ತವಾಗಿ ಜರುಗಿತು.
ದೀಪೋತ್ಸವದ ಕೊನೆಯ ದಿನ ಗೌರಿ ಮಾರುಕಟ್ಟೆ ಉತ್ಸವವು ನಡೆದಿದ್ದು, ದೇವಾಸ್ಥಾನದಲ್ಲಿ 16 ಸುತ್ತು ಪ್ರದಕ್ಷಿಣೆಯ ನಂತರ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರಗೆ ತರಲಾಯಿತು. ತದನಂತರ ಮೂರ್ತಿಯನ್ನು ರಥದಲ್ಲಿರಿಸಿದ ಮೂರ್ತಿಗೆ ಓಲಗ, ಚೆಂಡೆ, ಗೊಂಬೆಗಳ ಕುಣಿತ, ಜಗ್ಗಲಿಗೆ, ಬ್ಯಾಂಡ್ ಸೆಟ್, ವೀರಗಾಸೆ, ಡೊಳ್ಳು ಕುಣಿತ, ತಮಣೆ ವಾದ್ಯಗಳ ಸೇವೆ ಸಲ್ಲಿಸಲಾಯಿತು.
ವಿವಿಧ ವರ್ಣಗಳ ಛತ್ರಿ ಛಾಮರ ಧ್ವಜಗಳೊಂದಿಗೆ ರಥದಲ್ಲಿ ಸ್ವಾಮಿ ಮೂರ್ತಿಯನ್ನಿರಿಸಿ ರಥವನ್ನೆಳೆಯಲಾಯಿತು. ಮೂರ್ತಿಯನ್ನು ಗೌರಿಮಾರುಕಟ್ಟೆಯ ಕಟ್ಟೆಯ ಮೇಲೆ ಕುಳ್ಳಿರಿಸಿ ಚುತುರ್ವೇದ, ಸಂಗೀತ, ಮೌರ್ಯವಾದ್ಯ, ಸರ್ವವಾದ್ಯಗಳಿಂದ ಸ್ವಾಮಿಗೆ ಅಷ್ವವಿಧಾನ ಸೇವೆಯನ್ನು ನೆರವೇರಿಸಲಾಯಿತು.
ಗೌರಿ ಮಾರುಕಟ್ಟೆಯಲ್ಲಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ, ರಥ ಬೀದಿಯ ಮಾರ್ಗವಾಗಿ ದೇವರನ್ನು ದೇವಸ್ಥಾನದ ಬಳಿ ತರಲಾಯಿತು. ದೇವಸ್ಥಾನವನ್ನು ಒಂದು ಸುತ್ತು ಪ್ರದಕ್ಷಿಣೆ ಹಾಕಿ, ದೇವರ ಮೂರ್ತಿಯನ್ನು ದೇವಳದ ಒಳಗೆ ಕರೆದೊಯ್ಯುದರೊಂದಿಗೆ ಗೌರಿ ಮಾರುಕಟ್ಟೆ ಉತ್ಸವವು ಸಂಪನ್ನಗೊಂಡಿತು.
ದೇವಸ್ಥಾನದ ಆಡಳಿತ ವರ್ಗ, ಪೋಲಿಸ್ ಇಲಾಖೆ, ಪುರೋಹಿತರು ವರ್ಗ ಮತ್ತು ಸ್ವಯಂಸೇವಕರು ಮೆರವಣಿಗೆಯಲ್ಲಿ ಸುಲಲಿತವಾಗುವಂತೆ ಮಾಡಲು ಸಹಕರಿಸಿದರು. ಒಂದು ಲಕ್ಷಕ್ಕೂ ಅಧಿಕ ಜನ ಪಾಲ್ಗೊಂಡಿದ್ದರೂ ಎಲ್ಲಾ ವಿಧಿ ವಿಧಾನಗಳು ಅಚ್ಚುಕಟ್ಟಾಗಲು ಇವರ ಶ್ರಮ ಅಧಿಕವಾಗಿತ್ತು.
- ಸುಚೇತಾ ಹೆಗಡೆ
ದ್ವಿತೀಯ ಎಂ.ಎ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ , ಉಜಿರೆ
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ