ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ

Upayuktha
0


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬರಲಿರುವ ನೂತನ ವರ್ಷಕ್ಕೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದು, ಹೊಸ ವರ್ಷ ಎಲ್ಲರಿಗೂ ಸಮೃದ್ಧಿ, ನೆಮ್ಮದಿ ತರಲೆಂದು ಹಾರೈಸಿದ್ದಾರೆ.


ಈ ಬಗ್ಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಅವರು- ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ಹುರುಪು, ನವ ಚೈತನ್ಯದೊಂದಿಗೆ ಹೊಸ ವರ್ಷವನ್ನು ಸಂಭ್ರಮ- ಸಡಗರದಿಂದ ಸ್ವಾಗತಿಸೋಣ. 

ಹವಾಮಾನ ವೈಪರೀತ್ಯ ಹಾಗೂ ಬದಲಾದ ಸನ್ನಿವೇಶದಲ್ಲಿ ಪ್ರಕೃತಿ-ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಆರೋಗ್ಯ ಭಾಗ್ಯ ಕಾಪಾಡುವ ಬಗ್ಗೆ ಎಲ್ಲರೂ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ. ದುಃಖ, ದುಮ್ಮಾನಗಳು ದೂರವಾಗಿ ಎಲ್ಲೆಲ್ಲೂ ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ. ಮಾನವೀಯತೆ ಮೆರೆಯಲಿ.

 ಎಲ್ಲರೂ ಅವರವರ ಕ್ಷೇತ್ರದಲ್ಲಿ ಉನ್ನತ ಸೇವೆ - ಸಾಧನೆ ಮಾಡುವಂತಾಗಲೆಂದು ಆಶಿಸುತ್ತಾ, ಸರ್ವರಿಗೂ ಹೊಸ ವರ್ಷ ಹರ್ಷದಾಯಕವಾಗಲಿ ಎಂದು ಹಾರೈಸುತ್ತೇನೆ. ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಆಶಿಸಿದ್ದಾರೆ.



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top