ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ಇದರ ಸ್ವಯಂ ಸೇವಕರಿಗೆ "ಪರಿಸರ ಮತ್ತು ನಾವು: ನೇಜಿ ನಾಟಿ ಪ್ರಾತ್ಯಕ್ಷಿಕೆ "ನವ ಚೇತನ" ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದ ಅಡಿಯಲ್ಲಿ ಒಂದು ದಿನದ ಶಿಬಿರವನ್ನು ನಿನ್ನೆ (ಡಿ.11) ಕಾಂತಾಜೆ (ಕೊಯ್ಯೂರು) ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಎಲ್ಲಾ ಸ್ವಯಂ ಸೇವಕರು ಸೇರಿ ನೇಜಿ ನೆಡುವ ಮೂಲಕ ಈ ಕಾರ್ಯಕ್ರಮವನ್ನು ಉತ್ತಮವಾಗಿ ಯಶಸ್ವಿಗೊಳಿಸಿದರು. ಊರಿನವರು ನೀಡಿದ ಮಾಹಿತಿಯಿಂದ ಹಾಗೂ ಅವರ ಸಹಾಯದಿಂದ ಈ ಕಾರ್ಯಕ್ರಮವು ಯಶಸ್ವಿಯಿಂದ ನಡೆಯಿತು. ಜೊತೆಗೆ ಮನರಂಜನಾ ಆಟಗಳನ್ನು ಆಡಲಾಯಿತು. ವಿದ್ಯಾರ್ಥಿಗಳು ಹೊಸ ಅನುಭವಗಳನ್ನು ಪಡೆದರು. ಬೆಳಗಿನ ಉಪಹಾರ ಹಾಗೂ ಮದ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ರಾ.ಸೇ.ಯೋಜನೆಯ ಯೋಜನಾಧಿಕಾರಿ ಪ್ರೊ. ಚಿತ್ರಾ ಪಡಿಯಾರ್ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ