ಪುತ್ತೂರು: 2023-24 ರ ಪದವಿಪೂರ್ವ ಬಾಲಕಿಯರ ವಿಭಾಗದ ರಾಜ್ಯ ಮಟ್ಟದ ಹ್ಯಾಮರ್ ತ್ರೋ ಸ್ಪರ್ಧಾ ವಿಭಾಗದಲ್ಲಿ ಪೃಥ್ವಿ.ಕೆ ಇವರು ಕರ್ನಾಟಕ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಪೃಥ್ವಿ ಕೆ ಬೆಳ್ಳಿಯ ಪದಕ ಪಡೆದರು. ಇವರು ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ. ಇವರು ಪರ್ಪುಂಜದಲ್ಲಿರುವ ಸೌಗಂಧಿಕಾ ನರ್ಸರಿಯ ಮಾಲಕರಾದ ಚಂದ್ರ ಸೌಗಂಧಿಕಾ ಮತ್ತು ವಿದ್ಯಾಲಕ್ಷ್ಮಿಯವರ ಪುತ್ರಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ