ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಸಂಘದ ಬಹುಮಾನ ವಿತರಣಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Upayuktha
0


ಮೂಡುಬಿದಿರೆ: ಜನಪ್ರಿಯತೆಗೆ ಸರಳ ಮಾರ್ಗವಿದೆ, ಆದರೆ ಸಾಧನೆಗಲ್ಲ. ಸಾಧನೆ ಸತತ ಪ್ರಯತ್ನದ ಫಲ ಎಂದು ಸುವರ್ಣ ಸುದ್ದಿವಾಹಿನಿಯ ಪ್ರಧಾನ ಸಂಪಾದಕ ಅಜಿತ್ ಹನಮಕ್ಕನವರ್ ಹೇಳಿದರು.


ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ ಸಾಂಸ್ಕೃತಿಕ ಸಂಘದ ವತಿಯಿಂದ  ಮೂಡುಬಿದಿರೆಯ ಭಾರತ್ ಸೈಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ  ಆಯೋಜಿಸಿದ್ದ ಬಹುಮಾನ ವಿತರಣಾ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದರು. 


ನಿಮ್ಮನ್ನು ಕರೆಯುತ್ತಿರುವ ಜಗತ್ತಿಗೆ ತಯಾರಾಗಿ, ಬರೀ ಪರೀಕ್ಷೆಗಳಿಗಲ್ಲ. ಶಿಕ್ಷಣದ ಪ್ರತಿ ಹಂತವು ಪ್ರಮುಖವಾದರೂ, ಶಿಕ್ಷಣ ಮುಗಿಸಿ ನಾವು ಸಾಗುವ ವೃತ್ತಿ ಕ್ಷೇತ್ರದಲ್ಲಿನ ನಮ್ಮ ಕ್ಷಮತೆ ನಮ್ಮ ಯಶಸ್ಸನ್ನು ನಿರ್ಧರಿಸುತ್ತದೆ.  ಹಾಗಾಗಿ ಪರೀಕ್ಷೆಯಲ್ಲಿ ಹೆಚ್ಚು ಅಂಕ  ಬಂತು ಎಂದಾಗ ಹೆಚ್ಚಿನ ಆತ್ಮವಿಶ್ವಾಸವೂ ಬೇಡ, ಕಡಿಮೆ ಬಂತೆAದು ಕುಗ್ಗುವಿಕೆಯು ಸಲ್ಲ.  ವೃತ್ತಿ ಮತ್ತು ಪ್ರವೃತ್ತಿ ಒಂದೇ ಆಗಿರಬೇಕು. ಯಾವಾಗ ನಮ್ಮ ಹವ್ಯಾಸವೇ ನಮ್ಮ ಕೆಲಸವಾಗುತ್ತದೆಯೋ ಅಂದು ಯಶಸ್ಸು ನಮ್ಮದಾಗುತ್ತದೆ. ಎಲ್ಲರೂ ಖುಷಿ ಪಡಲು ವಾರದ ಕೊನೆಯ ದಿನವನ್ನು ಬಯಸುತ್ತಾರೆ, ಜೀವನ ಎಂದಿಗೂ ಒಂದೇ ದಿನಕ್ಕೆ ಕಾಯುವಂತಿರಬಾರದು. ಪ್ರತಿಯೊಂದು ದಿನವೂ ನಮಗೆ ಅತೀ ಮುಖ್ಯ. ಸಣ್ಣ ಕನಸ್ಸನ್ನು ಇಟ್ಟು, ಒಂದೊAದೇ ಮೆಟ್ಟಿಲೇರುವುದು, ದೊಡ್ಡ ಕನಸಿಗಿಂತ ಉತ್ತಮ. ಜೀವನದಲ್ಲಿ ತತ್‌ಕ್ಷಣದಲ್ಲಿ ಬರುವ ಸಂದರ್ಭಗಳನ್ನು ಎದುರಿಸುವುದನ್ನು ಕಲಿತಾಗ ಮಾತ್ರ ಯಶಸ್ಸು ಸಾಧ್ಯ. ನಿಮ್ಮ ಪಾಲಿನ ಸಂಶೋಷ ಮತ್ತು ಯಶಸ್ಸು ಯಾವುದೆಂಬುದನ್ನು ನಿರ್ಧರಿಸಿ ಕೊಂಡು ಮುಂದೆ ಸಾಗಿ ಎಂದು ವಿದ್ಯಾರ್ಥಿಗಳಿಗೆ ಹಾರೈಸಿದರು.ನಾವೆಲ್ಲರೂ ತಯಾರಾಗಬೇಕಾಗಿರುವುದು ಪರೀಕ್ಷೆಗಳಿಗೆ ಮಾತ್ರವಲ್ಲ, ನೆನಪಿರಲಿ ಬದುಕಿಗಾಗಿ. ಅಂತಹ  ನಾಳೆಯ ಬದುಕಿಗಾಗಿ ವಿದ್ಯಾರ್ಥಿಗಳನ್ನು ತಯಾರುಗೊಳಿಸುವಲ್ಲಿ ಆಳ್ವಾಸ್ ವಿದ್ಯಾಸಂಸ್ಥೆ  ಮುಂಚೂಣಿಯಲ್ಲಿದೆ.  


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಪ್ರಾಚರ‍್ಯ ಡಾ. ಕುರಿಯನ್ ಮಾತನಾಡಿ, ಬದುಕಿನಲಿ ಸ್ವಯಂ ನಿಯಂತ್ರಣವೆAಬುದು ಮುಖ್ಯ. ಯಾವ ವ್ಯಕ್ತಿ ಸ್ವಯಂ ನಿಯಂತ್ರಣ ಸಾಧಿಸುತ್ತಾನೋ ಅವನು ಬದುಕಿನ ಸಫಲತೆಯ ಮಾರ್ಗದಲ್ಲಿ ಸಾಗಲು ಸಾಧ್ಯ.  


ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ  ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮಹಮ್ಮದ್ ಸದಾಕತ್,  ಶಿಕ್ಷಣ ಸಂಸ್ಥೆ ಕಲಿಸಿದ ಪಠ್ಯವನ್ನು ನಾವು ಮರೆಯಬಹುದು,  ಆದರೆ ಶಿಕ್ಷಣದ ಹಂತದಲ್ಲಿ ಕಲಿತ ಜೀವನ ಪಾಠ ನಮ್ಮನ್ನು ಯಶಸ್ಸಿನೆಡೆಗೆ ಒಯ್ಯಬಲ್ಲದು.  


ಕಾರ್ಯಕ್ರಮದ ಮುಖ್ಯ ಅತಿಥಿ ಸುವರ್ಣ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕ ಅಜಿತ್ ಹನಮಕ್ಕನವರ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸಾಂಸ್ಕೃತಿಕ, ಕ್ರೀಡೆ ಹಾಗೂ ಶೈಕ್ಷಣಿಕ ವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು ಮತ್ತು ಆಳ್ವಾಸ್ ಪದವಿ ಪೂರ್ವ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್. ಡಿ, ಪದವಿ ಪೂರ್ವ ವಿದ್ಯಾರ್ಥಿಗಳು, ಉಪನ್ಯಾಸಕರು, ಇದ್ದರು.


ಕಾರ್ಯಕ್ರಮವನ್ನು ಪದವಿ ಪೂರ್ವ ವಿಭಾಗದ ಕನ್ನಡ ಉಪನ್ಯಾಸಕ ಟಿ. ಎನ್ ಖಂಡಿಗೆ ನಿರೂಪಿಸಿದರು ಮತ್ತು ಸಾಂಸ್ಕೃತಿಕ ಸಂಘದ ಸಂಚಾಲಕಿ ಶಾಲೆಟ್ ಮೊನಿಸ್ ಸ್ವಾಗತಿಸಿ, ಉಪನ್ಯಾಸಕಿ ರುಚಿಕಾ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top