ಮುಳಿಯಾರು: ಮುಳಿಯಾರಿನ ಗೋಳಿಯಡ್ಕ ಶ್ರೀ ವೆಂಕಟ್ರಮಣ ಆದಿಭೈರವ ಅಮ್ಮನವರ್ ಕ್ಷೇತ್ರ ನವೀಕರಣ ಪ್ರತಿಷ್ಠಾ ಮಹೋತ್ಸವವು ಏಪ್ರಿಲ್ 26 ರಿಂದ ಒಂದು ವಾರ ಜರಗಲಿದ್ದು, ಸಮಾರಂಭವನ್ನು ಯಶಸ್ವಿಯಾಗಿ ಆಚರಿಸಲು ಬ್ರಹ್ಮಕಲಶೋತ್ಸವ ಸಮಿತಿ ಸಭೆಯು ಶ್ರೀ ಕ್ಷೇತ್ರ ಸನ್ನಿಧಿಯಲ್ಲಿ ಜರಗಿತು.
ಸಮಿತಿ ಉಪಾಧ್ಯಕ್ಷ ಮಧುಸೂಧನ ಕೋಡಿ ಅಧ್ಯಕ್ಷ ಸ್ಥಾನವಹಿಸಿದರು. ಕ್ಷೇತ್ರ ಪುನರ್ನಿರ್ಮಾಣ ಸಮಿತಿ ಅಧ್ಯಕ್ಷ ವಾಮನ ಆಚಾರ್ಯ ಬೋವಿಕ್ಕಾನ ಇವರು ಬ್ರಹ್ಮಕಲಶದ ಬಗ್ಗೆ ರೂಪುರೇಷೆಗಳನ್ನು ನೀಡಿದರು. ಉಪ ಸಮಿತಿಗಳು ಹೇಗೆ ಕಾರ್ಯಾಚರಿಸಬೇಕೆಂಬುದರ ಬಗ್ಗೆ ಗೋವಿಂದ ಬಳ್ಳಮೂಲೆ ವಿವರಣೆಗಳನ್ನಿತ್ತರು.
ಸಭೆಯಲ್ಲಿ ಅಪ್ಪುಟ್ಟ ಅಮ್ಮಂಗೋಡ್, ಕೃಷ್ಣ ಅಮ್ಮಂಗೋಡ್, ಅಜಿತ್, ಶಶಿ ಹಾಗೂ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡರು. ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಗೋಳಿಯಡ್ಕ ಪ್ರಸ್ತಾವನೆ ಮಾಡಿ ಸ್ವಾಗತಿಸಿ, ಸುಂದರ ಧನ್ಯವಾದವಿತ್ತರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



