ಉಡುಪಿ: ಅಯೋಧ್ಯೆಯ ಶ್ರೀರಾಮ ದೇವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ನಿತ್ಯ ಪೂಜಾ ಪರಿಕರ ಮತ್ತು ಬೆಳ್ಳಿಯ ಪೂಜಾ ಸಾಮಗ್ರಿಗಳನ್ನು ಇಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಡಿ. ಹರ್ಷೇಂದ್ರ ಕುಮಾರ್ ಅವರ ಮೂಲಕ ಉಡುಪಿಯ ಪೇಜಾವರ ಮಠದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಹಸ್ತಾಂತರಿಸಿದರು.
ಪೇಜಾವರ ಶ್ರೀಗಳು ಅಯೋಧ್ಯೆಯ ಶ್ರೀರಾಮ ತೀರ್ಥಕ್ಷೇತ್ರ ಟ್ರಸ್ಟ್ನ ಟ್ರಸ್ಟಿಯಾಗಿದ್ದು, ಜ.22ರಂದು ಬಾಲರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
ಅವರ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀರಾಮ ಪೂಜೆಗೆ ನೀಡಲಾಗುವ ಪೂಜಾ ಪರಿಕರಗಳನ್ನು ಅಯೋಧ್ಯೆಗೆ ತಲುಪಿಸಲು ಹೆಗ್ಗಡೆಯವರು ನಿರ್ಧರಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ