ದ.ಕ ಜಿಲ್ಲಾ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

Upayuktha
0

ಮಂಗಳೂರು; ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ ರವಿವಾರ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದ ಸಮಾರೋಪ ಸಮಾರಂಭದಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹಾಗೂ ರೋಹನ್ ಕಾರ್ಪೊರೇಷನ್ ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ಕ್ರಿಕೆಟ್ ಪಂದ್ಯದಲ್ಲಿ ಪ್ರಥಮ ಬಹುಮಾನ ಪಡೆದ ವಾರ್ತಾಭಾರತಿ ಹಾಗೂ ದ್ವಿತೀಯ  ಬಹುಮಾನ  ಪಡೆದ ಅಭಿಮತ ತಂಡಕ್ಕೆ ಬಹುಮಾನ ವಿತರಿಸಿ ಶುಭ ಹಾರೈಸಿದರು.




ಬ್ರ್ಯಾಂಡ್ ಮಂಗಳೂರು ಹೆಸರಿನಲ್ಲಿ ಮಂಗಳೂರಿನ ಸಕಾರಾತ್ಮಕ ಬೆಳವಣೆಗೆಗೆ ಪತ್ರಕರ್ತರ ಕೊಡುಗೆ ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ರಾಜೇಶ್ ಪೂಜಾರಿ, ಕಾರ್ಯಕ್ರಮ ಸಂಯೋಜಕರಾದ ವಿಲ್ಫೆಡ್ ಡಿ ಸೋಜ, ದಯಾ ಕುಕ್ಕಾಜೆ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ (ನಾ.ನಿ)ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಕಿಶನ್ ಮತ್ತು ಗಣೇಶ್ ಕಾರ್ಯ ಕ್ರಮ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
To Top