ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Upayuktha
0

 


ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿ ಮೂರ್ತಿಗೆ ಫೆ.2 ರಂದು ಶುಕ್ರವಾರ ಬೆಳಿಗ್ಯೆ ಗಂಟೆ 8:30 ರಿಂದ ಭವ್ಯ ಅಗ್ರೋದಕ ಮೆಡರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.


ಇದಕ್ಕೆ ಪೂರ್ವಭಾವಿಯಾಗಿ ಫೆ. ಒಂದರಂದು ಗುರುವಾರ ರತ್ನಗಿರಿಯಲ್ಲಿ ಬೆಳಿಗ್ಯೆ ಗಂಟೆ 9 ರಿಂದ ತೋರಣ ಮೂಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top