ಭಾಷೆ ಬಳಕೆಯಿಂದ ಮಾತ್ರ ನಮ್ಮದಾಗುತ್ತದೆ : ಹೆಚ್.ಕೆ. ಪುಷ್ಪಲತಾ

Upayuktha
0



ಹಾಸನ: ಭಾಷೆ ಅಭ್ಯಾಸದಿಂದ ಮಾತ್ರ ಗಟ್ಟಿತನ ಪಡೆಯುತ್ತದೆ ಹಾಗೂ ನಿತ್ಯದ ಬಳಕೆಯಿಂದ ನಮ್ಮದಾಗುತ್ತದೆ. ಭಾಷಾ ಬೆಳವಣಿಗೆಯಲ್ಲಿ ವ್ಯಾಕರಣಾಂಶಗಳು ಅತ್ಯಂತ ಹೆಚ್ಚು ಮಹತ್ವ ಪಡೆಯುತ್ತವೆ. ಇಂಗ್ಲೀಷ್ ಒಂದು ಸಂವಹನ ಭಾಷೆಯಾಗಿದ್ದು ಅದನ್ನು ವ್ಯಾಕರಣಾಂಶಗಳ ಮೂಲಕ ವಿದ್ಯಾರ್ಥಿಗಳಿಗೆ ದಿನನಿತ್ಯ ತರಗತಿ ನಿರ್ವಹಣೆಯಾದರೆ ಇಂಗ್ಲಿಷ್ ಭಾಷಾ ಕಲಿಕೆ ಸುಲಭವೆನಿಸುತ್ತದೆ ಎಂದು ಹಾಸನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಆದ ಹೆಚ್.ಕೆ. ಪುಷ್ಪಲತಾ ಹೇಳಿದರು. 




ಸರಿಸುಮಾರು ಎರಡು ವರ್ಷಗಳಿಂದ ಪ್ರತಿ ಶನಿವಾರ ವಿದ್ಯಾ ಪ್ರವೇಶ ಮತ್ತು ನಲಿಕಲಿ ಜಿಲ್ಲಾ ತಂಡವು ಆಯೋಜಿಸಿ  ಡಯಟ್ ವತಿಯಿಂದ ನಡೆಸಲಾಗುತ್ತಿರುವ ಆನ್ಲೈನ್ ವಿಶೇಷ ಮಾಹಿತಿ ಹಂಚಿಕೆ ಕಾರ್ಯಕ್ರಮದಲ್ಲಿ ಮಾರ್ಗದರ್ಶಕರಾಗಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಇಪ್ಪತ್ತೊಂದನೇ ಶತಮಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಒಂದು ಸಂಪರ್ಕ ಭಾಷೆಯಾಗಿದ್ದು ಅದನ್ನು ವಿದ್ಯಾರ್ಥಿಗಳು ಕಲಿಯುವುದು ಮತ್ತು ಶಿಕ್ಷಕರು ಕಲಿಸುವುದು ಪ್ರಮುಖ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಇಂದು ಸಂಪನ್ಮೂಲ ವ್ಯಕ್ತಿಗಳಾದ ಕೆ.ಎನ್. ಚಿದಾನಂದರವರು ಅತ್ಯುತ್ತಮವಾಗಿ ತರಗತಿ ನಿರ್ವಹಣೆ ಮಾಡಿದ್ದು ಇಂಗ್ಲಿಷ್ ಭಾಷಾ ಕಲಿಕೆಯು ಅತ್ಯಂತ ಸರಳವಾಗಿ ಸುಲಭವಾಗಿ ಕಲಿಸುವ ವಿಧಾನಗಳನ್ನು ಎಲ್ಲರಿಗೂ ಅರ್ಥವಾಗುವಂತೆ ಹೇಳಿರುತ್ತಾರೆ. 



ಮುಂದುವರಿದು ಮಾತನಾಡಿದ ಅವರು ಇದೇ ತಿಂಗಳ ಅಂತ್ಯದಲ್ಲಿ ಇಂಗ್ಲಿಷ್ ಫೆಸ್ಟ್ ಕಾರ್ಯಕ್ರಮವು ಎಲ್ಲ ಸರ್ಕಾರಿ ಶಾಲೆಗಳಲ್ಲಿ ಉತ್ತಮ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. 2024ರ ಫೆಬ್ರವರಿ ಮಾಹೆಯನ್ನು ಡಯಟ್ ವತಿಯಿಂದ ವಿಜ್ಞಾನ ಮಾಸಾಚರಣೆ ಎಂದು ಆಚರಿಸಲಾಗುವುದು ಎಂದು ತಿಳಿಸುತ್ತಾ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ವಿಜ್ಞಾನ ಮಾಸಾಚರಣೆಯನ್ನು ಎಲ್ಲಾ ಶಿಕ್ಷಕರು ಹೆಚ್ಚು ಗಮನಹರಿಸಿ ಎಲ್ಲರ ಸಹಕಾರದೊಂದಿಗೆ ನಡೆಸಿ ಯಶಸ್ವಿಗೊಳಿಸಬೇಕು ಎಂದರು. 



ಈ ಆನ್ಲೈನ್ ವಿಶೇಷ ಮಾಹಿತಿ ಹಂಚಿಕೆ ಕಾರ್ಯಕ್ರಮದಲ್ಲಿ ಸಂಚಾಲಕರು ಮತ್ತು ಡಯಟ್ ನ ಉಪನ್ಯಾಸಕರು ಆದ ಹೆಚ್. ಕೆ. ವಿಜಯಲಕ್ಷ್ಮಿ ರವರು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಭಾಷೆ ಕೌಶಲ್ಯಾಧಾರಿತ ವಾಗಿದ್ದು ಪ್ರಮುಖವಾಗಿ ಆಲಿಸುವುದು, ಮಾತನಾಡುವುದು, ಓದುವುದು ಮತ್ತು ಬರೆಯುವುದು ಎಂಬ ಕೌಶಲಗಳನ್ನು ಕಲಿಸಲು ಶಿಕ್ಷಕರು ಒತ್ತು ನೀಡಬೇಕು. ಜನವರಿ ತಿಂಗಳಲ್ಲಿ ಡಯಟ್ ವತಿಯಿಂದ ಇಂಗ್ಲಿಷ್ ಮಾಸಾಚರಣೆಯನ್ನು ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಆಚರಿಸಿ ದಾಖಲೆ ನಿರ್ವಹಣೆ ಮಾಡುವುದು ಅತ್ಯಗತ್ಯ ಎಂದರು. 




ನಗರದ ಆರ್.ಸಿ. ರಸ್ತೆಯಲ್ಲಿರುವ ಜಿಜಿಜೆಸಿ ಪ್ರಧಾನ ಪ್ರೌಢಶಾಲೆಯ ಸಹ ಶಿಕ್ಷಕರಾದ ಕೆ.ಎನ್. ಚಿದಾನಂದ ರವರು ಸಂಪನ್ಮೂಲ ವ್ಯಕ್ತಿಯಾಗಿ ಆನ್ ಲೈನ್ ಕ್ಲಾಸ್ ನ್ನು ನಿರ್ವಹಣೆ ಮಾಡುತ್ತ ಶಿಕ್ಷಕರನ್ನು ಕುರಿತು ಇಂಗ್ಲಿಷ್ ಭಾಷೆಯು ಇಂದಿನ ಅತ್ಯಗತ್ಯ ಭಾಷೆಗಳಲ್ಲಿ ಒಂದಾಗಿದ್ದು ಭಾಷೆಯ ಮೂಲಕವೇ ಮಗು ವ್ಯಕ್ತಿತ್ವವನ್ನು  ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಂಗ್ಲಿಷ್ ಕೂಡಾ ಒಂದು ಭಾಷೆಯಾಗಿದ್ದು ಅದನ್ನು ಕಲಿಯಲು ಮೂಲ ಮತ್ತು ಅತ್ಯಗತ್ಯ ಪದಗಳನ್ನು ಶಿಕ್ಷಕರು ಅನುಕೂಲಿಸಬೇಕು. ಇಂದಿನ ತರಗತಿಯಲ್ಲಿ ಕ್ರಿಯಾಪದಗಳ ಬಳಕೆ ಮತ್ತು ವಿವಿಧ ಕಾಲಗಳಲ್ಲಿ ಕ್ರಿಯಾಪದಗಳನ್ನು  ಅರ್ಥಗರ್ಭಿತವಾಗಿ ಹೇಗೆ ಉಪಯೋಗಿಸಬೇಕು ಎಂಬುದನ್ನು ಉದಾಹರಣೆಗಳೊಂದಿಗೆ ತಿಳಿಸಿದರು. ಭಾಷೆಯ ಪರಿಶುದ್ಧತೆಯನ್ನು ಮಗು ಕಲಿಯಲು ಇಂಗ್ಲಿಷ್ ನ ಈ ಅಧ್ಯಾಯಗಳು ಬಹಳ ಪ್ರಮುಖವಾಗಿದೆ ಎಂದರು. 




ಹಾಸನ ತಾಲ್ಲೂಕಿನ ಜಿ.ಎಲ್.ಪಿ.ಎಸ್, ಕಣಜನಹಳ್ಳಿ ಶಾಲಾ  ಶಿಕ್ಷಕರಾದ ಲೋಕೇಶ್ ರವರು ತಾಂತ್ರಿಕವಾಗಿ ಆಯೋಜನೆ ಮಾಡಿದರು. ಶಿಕ್ಷಕರಾದ ಕಲಾವತಿ ರವರು ಎಲ್ಲರನ್ನು ಸ್ವಾಗತಿಸಿದರು. ಜಿ.ಹೆಚ್.ಪಿ.ಎಸ್ ಸುಂಡಹಳ್ಳಿ ಚನ್ನರಾಯಪಟ್ಟಣ ತಾಲೂಕಿನ ಶಿಕ್ಷಕರಾದ ಮಧು ರವರ ಕಾರ್ಯಕ್ರಮ ನಿರೂಪಣೆಯಲ್ಲಿ ಶಿಕ್ಷಕರಾದ ಭಾರತಿ ರವರು ಪ್ರಾರ್ಥಿಸಿದರೆ ಶಿಕ್ಷಕರಾದ ಭವ್ಯ ರವರು ಸರ್ವರನ್ನು ವಂದಿಸಿದರು. ರಾಜ್ಯದ ವಿವಿಧ ತಾಲ್ಲೂಕುಗಳು ಹಾಗೂ ಜಿಲ್ಲೆಗಳಿಂದ ಶಿಕ್ಷಕರು ಆನ್ ಲೈನ್ ಟೆಲಿಗ್ರಾಂ ಗ್ರೂಪ್ ನಲ್ಲಿ ಭಾಗವಹಿಸಿದ್ದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top