ಮಂಗಳೂರು: "ಕಾವ್ಯ ಮತ್ತು ಜೀವನ ನಾಣ್ಯದ ಎರಡು ಮುಖಗಳಿದ್ದಂತೆ. ಆದರೆ ವಿಚಾರ ಮತ್ತು ವಾಸ್ತವ ಯಾವತ್ತೂ ಭಿನ್ನವಾಗಿರುತ್ತವೆ. ಈ ಭಿನ್ನತೆಯನ್ನು ಅರಿಯಲು ಕಾವ್ಯ ಸಹಕಾರಿ. ಆದುದರಿಂದ ಕಾವ್ಯವನ್ನು ಒಂದು ಶೋಧವೆಂದು ಪರಿಗಣಿಸಬಹುದು" ಎಂದು ಖ್ಯಾತ ಕೊಂಕಣಿ ಕವಿ ಗೋವಾದ ನೂತನ್ ಸಾಖರ್ದಾಂಡೆ ಅಭಿಪ್ರಾಯಪಟ್ಟರು.
ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೆಜಿನಲ್ಲಿ ಹೊಸದೆಹಲಿ ಸಾಹಿತ್ಯ ಅಕಾಡೆಮಿ ಹಮ್ಮಿಕೊಂಡ "ಕವಿಸಂಧಿ" ಕಾರ್ಯಕ್ರಮದಲ್ಲಿ ಸ್ವರಚಿತ ಕವಿತೆಗಳನ್ನು ವಾಚಿಸಿ, ತಮ್ಮ ಕಾವ್ಯಪ್ರವಾಸವನ್ನು ಹಂಚಿಕೊಂಡರು.
"ಅಸ್ವಸ್ಥತೆ ಕಾಡದೇ ಕವಿಯಾಗುವುದು ಕಷ್ಟ. ಕವಿಗಳು ರಮ್ಯ ಲೋಕದ ಆಚೆ, ಸಾಮಾಜಿಕ ಅಸಮಾನತೆ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಪರಿಸರದ ಮೇಲಾಗುತ್ತಿರುವ ಹಾನಿ ಈ ವಿಚಾರಗಳ ಮೇಲೆ ಕಾವ್ಯ ಕಟ್ಟಬೇಕು. ಕಾವ್ಯದ ತೌಲನಿಕ ಅಧ್ಯಯನ ನಡೆಯಬೇಕು" ಎಂಬ ಒತ್ತಾಸೆ ಕವಿ ನೂತನ್ ವ್ಯಕ್ತಪಡಿಸಿದರು.
ಜನಪ್ರಿಯ ಕವಿತೆಗಳಾದ- ಪಾಸ್ವರ್ಡ್, ಸ್ಮಾರ್ಟ್ಪೋನ್, ಅಧೊಳಿ ಒಳಗೊಂಡಂತೆ ಒಟ್ಟು ಏಳು ಕವಿತೆಗಳನ್ನು ಸಾದರಪಡಿಸಿದರು.
ಹೊಸದೆಹಲಿ ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷಾ ಸಲಹಾ ಸಮಿತಿಯ ಸಂಚಾಲಕ ಕವಿ ಮೆಲ್ವಿನ್ ರೊಡ್ರಿಗಸ್ ಪ್ರಾಸ್ತಾವಿಕ ಮಾತುಗಳನ್ನಾಡಿ, ನೂತನ್ ಸಾಖರ್ದಾಂಡೆಯವರನ್ನು ಪರಿಚಯಿಸಿದರು. ಸಾಹಿತ್ಯ ಅಕಾಡೆಮಿ ಕೊಂಕಣಿ ಭಾಷಾ ಸಲಹಾ ಸಮಿತಿಯ ಸದಸ್ಯ ಹೆನ್ರಿ ಮೆಂಡೋನ್ಸಾ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಇನ್ನೋರ್ವ ಸದಸ್ಯ ಸ್ಟ್ಯಾನಿ ಬೇಳ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ