ಪುತ್ತೂರು: ದ.ಕ. ತೆಂಗು ರೈತ ಉತ್ಪಾದಕರ ಸಂಸ್ಥೆಯ ಪೂರ್ವಭಾವಿ, ಸಲಹಾ ಸಮಿತಿ ಸಭೆ

Upayuktha
0



ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ, ಮುಂಬರುವ ಯೋಜನೆಗಳ ಕುರಿತ ಪೂರ್ವಭಾವಿ, ಸಲಹಾ ಸಮಿತಿಯ ಸಭೆಯನ್ನು ದಿನಾಂಕ ಜ.5 ರಂದು ಪುತ್ತೂರಿನ ರೋಟರಿ ಮನಿಷಾ ಹಾಲ್‍ನಲ್ಲಿ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸಲಹಾ ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಯಿತು. 




ಈ ಸಭೆಯಲ್ಲಿ ಸಂಸ್ಥೆಯ ಮುಂದಿನ ಮಹತ್ವಪೂರ್ಣ ಯೋಜನೆಗಳಿಗೆ ಸಲಹೆ ಸೂಚನೆಗಳ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು, ಮುಂದಿನ ದಿನಗಳಲ್ಲಿ, ಸಲಹಾ ಸಮಿತಿ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ, ಗೌರವ ಅಧ್ಯಕ್ಷರಾಗಿ ಕಡಮಜಲು ಸುಭಾಷ್ ರೈ, ಸಂಸ್ಥೆಯ ಕಾನೂನು ಸಲಹೆಗಾರರಾಗಿ ಚಿದಾನಂದ ಬೈಲಾಡಿ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳ ಸಲಹೆಗಾರರಾಗಿ ಬದನಾಜೆ ಶಂಕರ್ ಭಟ್, ಕೃಷಿ ಮಾಧ್ಯಮ ಸಲಹೆಗಾರರಾಗಿ ಕುಮಾರ್ ಪೆರ್ನಾಜೆ, ಕೃಷಿ ಅಭಿವೃದ್ಧಿ ಸಲಹೆಗಾರರಾಗಿ ಪ್ರಭಾಕರ್ ಮಯ್ಯ,  ಸುಸ್ಥಿರ ಕೃಷಿ ಸಲಹೆಗಾರರಾಗಿ ಅಮೈ ಮಾಲಿಂಗ ನಾಯ್ಕ, ಸಾವಯವ ಕೃಷಿ ಸಲಹೆಗಾರರಾಗಿ ಗಣಪಯ್ಯ ಭಟ್, ಯೋಜನೆಯ ಅಭಿವೃದ್ಧಿ ಸಲಹೆಗಾರರಾಗಿ ಐತ್ತೂರು ಪೂವಪ್ಪ ಗೌಡ, ಜಲ ಸಂರಕ್ಷಣೆ ಸಲಹೆಗಾರರಾಗಿ ಡೇವಿಡ್ ಜೈಮಿ ಕೊಕ್ಕಡ ರವರನ್ನು ಆಯ್ಕೆ ಮಾಡಲಾಯಿತು.





ಈ ಸಭೆಯಲ್ಲಿ ಮುಂದಿನ ಹಂತದ "ಕಲ್ಪ ವಿಕಾಸ " ಮಹತ್ವಾಕಾಂಶಿ ಯೋಜನೆಯ ರೂಪು -ರೇಷೆಗಳ ಬಗ್ಗೆ ಹಾಗೂ ತೆಂಗಿನ ಮೌಲ್ಯವರ್ಧಿತ ಉತ್ಪನ್ನಗಳ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಸಾವಯವ ತೆಂಗು ಕೃಷಿಗೆ ಉತ್ತೇಜನವನ್ನು ನೀಡುವುದರ ಜೊತೆಗೆ ವೈಜ್ಞಾನಿಕ ಕೃಷಿ ಬೆಳವಣಿಗೆಗೆ ಪ್ರೋತ್ಸಾಹವನ್ನು ನೀಡಲು ಹಾಗೂ ತೆಂಗು ಸಂಸ್ಥೆಯ ಪತ್ರಿಕೆ ಬಿಡುಗಡೆ ಕುರಿತು ಚರ್ಚಿಸಲಾಯಿತು.





ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕುಸುಮಾಧರ್ ಎಸ್ ಕೆ ಮಾತನಾಡಿ ಸಲಹಾ ಸಮಿತಿಯ ಸಲಹೆಗಳು ಸಂಸ್ಥೆಯ ಹಾಗೂ ರೈತರ ಬೆಳವಣಿಗೆಗೆ ಮಹತ್ವಪೂರ್ಣ ಎಂದು ತಿಳಿಸಿದರು. ಈ ಸಭೆಯಲ್ಲಿ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚೇತನ್ ಎ, ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ ಕೆ.ಎಸ್, ಆಡಳಿತ ನಿರ್ದೇಶಕರಾಗಿರುವ ಗಿರಿಧರ್ ಸ್ಕಂದ, ಲತಾ ಕೆ, ವಸಂತ ಕೆ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top