ಸನಾತನ ಸಂಸ್ಕೃತಿ, ಸಾಂಸ್ಕೃತಿಕ ಮೌಲ್ಯಗಳನ್ನು ಶ್ರೀಮಂತಗೊಳಿಸಿದ ಪ್ರಧಾನಿ ಮೋದಿ: ನವೀನ್ ಕುಮಾರ್

Upayuktha
0

ಬನಶಂಕರಿ 3ನೇ ಹಂತದ ಗುರುದತ್ತ ಬಡಾವಣೆಯ ಸಾಕೇತ್ ಅಪಾರ್ಟ್ಮೆಂಟ್‌ನಲ್ಲಿ ಗಣರಾಜ್ಯೋತ್ಸವ



ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿತ್ತು. 75ನೇ‌ ಗಣರಾಜ್ಯೋತ್ಸವ ಹಿನ್ನೆಲೆ‌ ರಾಜ್ಯ ರಾಜಧಾನಿ ಬೆಂಗಳೂರಿನ ಬನಶಂಕರಿ 3ನೇ ಹಂತದ ಗುರುದತ್ತ ಬಡಾವಣೆಯಲ್ಲಿ ಇರುವ ಸಾಕೇತ್ ಅಪಾರ್ಟ್ಮೆಂಟ್ ಮಾಲೀಕರ ಸಹಕಾರ ಸಂಘ ನಿಯಮಿತದ ವತಿಯಿಂದ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ 75ನೇ (ಅಮೃತ ಮಹೋತ್ಸವ) ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು.


ಸಾಕೇತ್ ಅಪಾರ್ಟ್ಮೆಂಟ್ ಮಾಲೀಕರ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ನವೀನ್ ಕುಮಾರ್ ಪೆ.ನಾ ಧ್ವಜಾರೋಹಣ ಮಾಡಿ ಮಾತನಾಡುತ್ತಾ, ರಾಮಮಂದಿರದಲ್ಲಿ ಶ್ರೀರಾಮ ಲಾಲನ ಪ್ರಾಣ ಪ್ರತಿಷ್ಠೆ ಮಾಡಿರುವ ದೇಶದ ಪ್ರಾಧಾನಿ ನರೇಂದ್ರ ಮೋದಿ ಜೀ ಅವರು ಈ ಬಾರಿಯ ಗಣ ರಾಜ್ಯೋತ್ಸವದ ಮೆರುಗು ಹೆಚ್ಚಿಸಿ  ದೇಶದಲ್ಲಿ ಸನಾತನ ಸಂಸ್ಕೃತಿ ಜೊತೆ ಜೊತೆಗೆ ದೇಶದ ಸಾಂಸ್ಕೃತಿಕ ಮೌಲ್ಯಗಳನ್ನು ಶ್ರೀಮಂತಗೊಳಿಸಿದ್ದಾರೆ ಎಂದು ನುಡಿದರು.


ಹಿರಿಯ ಉಪನ್ಯಾಸಕರಾದ ವಸಂತ ರವರು ಮಾತನಾಡಿ, ಸಂವಿಧಾನ ರಚನೆ, ಜಾರಿ, ಕುರಿತು ವಿವರಿಸಿ,  ದೇಶದ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿ, ಹಾಗೇ ದೇಶಭಕ್ತಿ ಗೀತೆ ಹಾಡಿದರು.


ಪುಟಾಣಿ ಮಕ್ಕಳಾದ ಶಾರ್ವರಿ, ಸುಧನ್ವ ವೈಷ್ಣವಿ ತಂಡ ದೇಶ ಭಕ್ತಿ ಗೀತೆ ಹಾಡಿದರು. ಸಾಕೇತ್ ಅಪಾರ್ಟ್ಮೆಂಟ್ ನಿವಾಸಿಗಳು, ಮಕ್ಕಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿಸಿದರು.


ಸಾಕೇತ್ ಅಪಾರ್ಟ್ಮೆಂಟ್ ಮಾಲೀಕರ ಸಹಕಾರ ಸಂಘ ನಿಯಮಿತದ ಕಾರ್ಯದರ್ಶಿ ಚಂದ್ರಶೇಖರರವರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


-ತೀರ್ಥಹಳ್ಳಿ ಅನಂತ ಕಲ್ಲಾಪುರ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top