ಸಿದ್ದೇಶ್ವರ ಪ್ರೌಢಶಾಲೆ ವಿದ್ಯಾರ್ಥಿಗಳು ವಿಜ್ಞಾನ ಸಮಾವೇಶದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Upayuktha
0



ಬಾಗಲಕೋಟೆ : ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜರುಗಿದ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಸಿರಿಧಾನ್ಯಗಳು ಅದ್ಭುತ ಆಹಾರ ಅವುಗಳನ್ನು ಬಳಸಿ ಆರೋಗ್ಯ ಸಿರಿಯನ್ನು ಹೆಚ್ಚಿಸಿಕೊಳ್ಳಿ ಎಂಬ ಅಮೂಲ್ಯವಾದ ಪ್ರಬಂಧವನ್ನು ಮಂಡಿಸಿ ನಿರ್ಣಾಯಕರ ಮೆಚ್ಚುಗೆಗೆ ಪಾತ್ರವಾಗಿ ರಾಷ್ಟ್ರಮಟ್ಟಕ್ಕೆ ಬಾಗಲಕೋಟೆ ತಾಲೂಕಿನ ಶ್ರೀ ಸಿದ್ದೇಶ್ವರ ಪ್ರೌಢಶಾಲೆ ಶಿರೂರನ ವಿದ್ಯಾರ್ಥಿನಿಯರಾದ ಸಹನಾ ಎಸ್ ಕೊಣ್ಣೂರ ಹಾಗೂ ರೇಣುಕಾ ವಾಯ್ ಹಿರೇಕುಂಬಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.




ಸೇಡಂನ ಶ್ರೀಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂರಕ್ಷಕ ಮಾಜಿ ರಾಜ್ಯಸಭಾ ಸದಸ್ಯ ಬಸವರಾಜ್ ಪಾಟೀಲ್ ಸೇಡಂ ಅವರಿಂದ ವಿದ್ಯಾರ್ಥಿಗಳು ಬಹುಮಾನ ಸ್ವೀಕರಿಸಿದರು.




ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ  ಆಯ್ಕೆಗೊಳ್ಳಲು ಕಾರಣೀಭೂತರಾದ ಶಿರೂರು ಸಿದ್ದೇಶ್ವರ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸಂಜಯ್ ನಡುವಿನಮನಿ ಮಾರ್ಗದರ್ಶನ ನೀಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶನ ಮಾಡಿದ ಶಿಕ್ಷಕರಿಗೆ ಸಿದ್ದೇಶ್ವರ ಪ್ರೌಢಶಾಲೆಯ ಮುಖ್ಯ ಗುರುಗಳು ಹಾಗೂ ಸಮಸ್ತ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.




   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   





Post a Comment

0 Comments
Post a Comment (0)
To Top