ವೈಜ್ಞಾನಿಕ ಸತ್ಯವಾಗಿರುವ ಉಪನಿಷತ್ತಿನ ವಿಚಾರಗಳು: ಪ್ರೊ. ರಾಮಚಂದ್ರ ಜಿ. ಭಟ್

Upayuktha
0



ಕಾರ್ಕಳ: ಮನುಷ್ಯ ಜನ್ಮದ ಶ್ರೇಷ್ಠತೆಯನ್ನು ವಿಜ್ಞಾನದ ವಿವರಣೆಯೊಂದಿಗೆ ಕರಾರುವಕ್ಕಾಗಿ ಉಪನಿಷತ್ತುಗಳಲ್ಲಿ ವಿವರಿಸಲಾಗಿದೆ. ಪಂಚಕೋಶಗಳ ಬಗ್ಗೆ ಅಲ್ಲಿರುವ ವಿವರಣೆಗಳು ವೈಜ್ಞಾನಿಕವಾಗಿಯೂ ಸತ್ಯ ಎಂಬುದು ಸಾಬೀತಾಗಿದೆ ಎಂಬುದಾಗಿ ಬೆಂಗಳೂರಿನ ವೇದವಿಜ್ಞಾನ ಶೋಧ ಸಂಸ್ಥಾನದ ನಿರ್ದೇಶಕರಾಗಿರುವ ಪ್ರೊ. ರಾಮಚಂದ್ರ ಜಿ. ಭಟ್ ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು.




ಕಾಂತಾವರ ಕನ್ನಡ ಸಂಘ, ಅಲ್ಲಮಪ್ರಭು ಪೀಠ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಹೋಟೇಲ್ ಪ್ರಕಾಶ್ ಸಭಾಂಗಣದಲ್ಲಿ ಜ.13ರಂದು ನಡೆದ ಉಪನಿಷದ್ ವರ್ಷ-ತಿಂಗಳ ಉಪನ್ಯಾಸ ಮಾಲೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡುತ್ತಾ ಅವರು ಮಾತನಾಡಿದರು. ವೇದ ಮೂಲವಾಗಿ 108 ಉಪನಿಷತ್ತುಗಳಿದ್ದರೂ ಅದರಲ್ಲಿ ವೇದಮಂಥನದಿಂದ ರೂಪತಾಳಿದ ದಶ ಉಪನಿಷತ್ತುಗಳು ಮುಖ್ಯವಾಗಿರುವಂಥಾದ್ದು. ಉಪನಿಷತ್ತುಗಳಲ್ಲಿ ವಿದ್ಯೆಯ ಬಗ್ಗೆ ವಿಶೇಷ ಉಲ್ಲೇಖವಿದ್ದು ಇಂತಹ ಉಪನಿಷತ್ತುಗಳು ಇಂದು ಪ್ರವಚನಕ್ಕಷ್ಟೇ ಸೀಮಿತವಾಗಿದ್ದು ಶಿಕ್ಷಣದಲ್ಲಿಯೂ ಇದು ಸೇರ್ಪಡೆಗೊಂಡು ಎಲ್ಲರೂ ಇದನ್ನು ಅಧ್ಯಯನ ನಡೆಸಿ ತಮ್ಮ ಜೀವನವನ್ನು ಉತ್ತಮಗೊಳಿಸಬಹುದು ಎಂಬುದಾಗಿಯೂ ತಿಳಿಸಿದರು. 




ಇದೇ ಸಂದರ್ಭದಲ್ಲಿ ಡಾ.ಬಿ.ಭಾಸ್ಕರ ರಾವ್ ಅವರ ‘ಮನುಸ್ಮøತಿ – ಒಂದು ವಿಶೇಷ ಕೃತಿ’ ಅನ್ನುವ ಪುಸ್ತಕವನ್ನು ಪ್ರೊ. ರಾಮಚಂದ್ರ ಜಿ.ಭಟ್ ಅವರು ಲೋಕಾರ್ಪಣೆಗೊಳಿಸಿದರು. ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ ಮತ್ತು ಏರ್‍ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಲತಿ ಜಿ.ಪೈ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ಮಿತ್ರಪ್ರಭಾ ಹೆಗ್ಡೆ ವಂದಿಸಿದರು.



-ಸದಾನಂದ ನಾರಾವಿ



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top