ವಿವೇಕಾನಂದ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯ ಆನೆಮಜಲು ವಿಷ್ಣುಭಟ್ ಅವರಿಗೆ ನುಡಿನಮನ

Upayuktha
0


ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯ ಹಾಗೂ ನಳಂದ ಮಹಾವಿದ್ಯಾಲಯ, ಪೆರ್ಲ ಇದರ ಆಡಳಿತ ಮಂಡಳಿಯ ಅಧ್ಯಕ್ಷರು, ಮಲ್ಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತಮೊಕ್ತೇಸರ ಧಾರ್ಮಿಕ ಮುಖಂಡ ಆನೆಮಜಲು ವಿಷ್ಣು ಭಟ್ ಮಂಗಳವಾರ ದೈವಾಧೀನರಾದ ಹಿನ್ನೆಲೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನುಡಿನಮನ ಸಲ್ಲಿಸಲಾಯಿತು. 


ಆನೆಮಜಲು ವಿಷ್ಣು ಭಟ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಮಾತು ಕಡಿಮೆ ಕೆಲಸ ಜಾಸ್ತಿ  ಎನ್ನುವ ಮಾತಿಗೆ ಉತ್ತಮ ನಿದರ್ಶನರಾದವರು. ಅಷ್ಟೇ ಅಲ್ಲದೆ ವಿವೇಕಾನಂದ ಸಂಸ್ಥೆಯ ಬೆಳವಣಿಗೆಗೆ ತಮ್ಮ ಪೂರ್ಣ ಪ್ರಮಾಣದ ಸಮಯವನ್ನು ಕೊಟ್ಟು ಎಲ್ಲರಿಗೂ ಮಾರ್ಗದರ್ಶನ ಮಾಡಿದವರು. ನಳಂದ ಸಂಸ್ಥೆ ದೊಡ್ಡ ಮಟ್ಟಿಗೆ  ಬೆಳೆಯಲು ಕಾರಣೀಭೂತರಾದ ವಿಷ್ಣುಭಟ್  ದೈವಾಧೀನರಾಗಿರುವುದು ವಿಷಾದದ ಸಂಗತಿ ಎಂದು ಅವರೊಂದಿಗಿನ ಒಡನಾಟವನ್ನು  ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಶಿವಪ್ರಸಾದ್ ಇ. ಸ್ಮರಿಸಿಕೊಂಡರು. 


ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರು, ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿ ಉಪಸ್ಥಿತಿದ್ದರು. 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top