ಕಲ್ಸಂಕ ದೈವಸ್ಥಾನದ ಬಳಿ ಅಂಗನವಾಡಿ ಕಟ್ಟಡಕ್ಕೆ ಶಾಸಕ ಕಾಮತ್ ಶಿಲಾನ್ಯಾಸ

Upayuktha
0



ಮಂಗಳೂರು: ನಗರದ ಹೊಯ್ಗೆ ಬಜಾರ್ ನ ಕಲ್ಸಂಕ ದೈವಸ್ಥಾನದ ಬಳಿ ವಿಶೇಷ ಅನುದಾನದಲ್ಲಿ ನಿರ್ಮಾಣವಾಗಲಿರುವ ನೂತನ ಅಂಗನವಾಡಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ನೆರವೇರಿಸಿದರು. 




ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರು ಅಂಗನವಾಡಿಗಳಿಗೆ ಒಟ್ಟು ರೂ.100.00 ಲಕ್ಷಗಳ ವಿಶೇಷ ಅನುದಾನ ಮಂಜೂರಾಗಿದ್ದು, ಈ ನಿಟ್ಟಿನಲ್ಲಿ ಸಾಕಷ್ಟು ಶ್ರಮ ವಹಿಸಿದ ಕ್ಷೇತ್ರದ ಜನಪ್ರಿಯ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಸ್ಥಳೀಯರು ಕೃತಜ್ಞತೆಗಳನ್ನು ಸಲ್ಲಿಸಿದರು.




ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯ ಲತೀಫ್, ಅನಿಲ್ ಕುಮಾರ್, ವಿನೋದ್ ಮೆಂಡನ್, ಯೋಗೀಶ್ ಕಾಂಚನ್, ಅವಿನಾಶ್ ಪ್ರಭು, ವನಿತಾ, ಸುಜಾತ, ಗಂಗಾಧರ್ ದೈವಸ್ಥಾನದ ಗುರಿಕಾರ, ಉಮೇಶ್ ಶೆಟ್ಟಿ, ದೇವಕಿ, ರಾಜೇಶ್ ಶೆಟ್ಟಿ, ಯಶಪಾಲ್ ಸುವರ್ಣ, ಸಂಕಪ್ಪ ಮುಂತಾದವರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top