ಮಂಗಳೂರು: ಬಿಜೆಪಿ ಭೀಷ್ಮಾಚಾರ್ಯರು, ಮಾಜಿ ಉಪ ಪ್ರಧಾನಿ ಎಲ್.ಕೆ ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಆಗಿರುವುದನ್ನು ಸಂಸದ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ.
ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, 'ಭಾರತೀಯ ಜನತಾ ಪಾರ್ಟಿಯ ಅದ್ವಿತೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಪ್ರಶಸ್ತಿ ಘೋಷಣೆಯಾಗಿರುವುದು ಪಕ್ಷದ ಸಮಸ್ತ ಕಾರ್ಯಕರ್ತರಿಗೆ ಅತ್ಯಂತ ಗೌರವದ ಕ್ಷಣವಾಗಿದೆ. ದೇಶದ ಸರ್ವಮಾನ್ಯ ನಾಯಕನಿಗೆ ದೇಶದ ಪರಮೋಚ್ಚ ಗೌರವ ಸಂದಿದೆ. ದ.ಕ.ಜಿಲ್ಲೆ ಅಪಾರ ಅಭಿಮಾನ ಹೊಂದಿದ್ದ ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದ ಕೇಂದ್ರ ಸರ್ಕಾರಕ್ಕೆ ದಕ್ಷಿಣ ಕನ್ನಡದ ಜನತೆಯ ಪರವಾಗಿ ಆಭಾರಿಯಾಗಿದ್ದೇನೆ' ಎಂದು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ