ಪುತ್ತೂರು ನಿಡ್ಪಳ್ಳಿ ಗ್ರಾಮ ಸಾಹಿತ್ಯ ಸಂಭ್ರಮ

Upayuktha
0

ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಕಡೆಗೆ ಒಲವು ಮೂಡಿಸುವ ಸ್ತುತ್ಯಾರ್ಹ ಕಾರ್ಯಕ್ರಮ: ಬಿ. ವೆಂಕಟರಮಣ ಬೋರ್ಕರ್



ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ನೇತೃತ್ವದಲ್ಲಿ, ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ನಿಡ್ಪಳ್ಳಿ ಸಹಕಾರದಲ್ಲಿ, ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ 13 ಕಾರ್ಯಕ್ರಮ ಸಮುದಾಯ ಭವನ ನಿಡ್ಪಳ್ಳಿಯಲ್ಲಿ ಸಭಾ ಕಾರ್ಯಕ್ರಮ ಉದ್ಘಾಟಿಸಿ "ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಒಲವು ಹೆಚ್ಚಾಗಲು ಈ ಗ್ರಾಮ ಸಾಹಿತ್ಯ ಸಂಭ್ರಮ ಸ್ತುತ್ಯಾರ್ಹ ಕಾರ್ಯಕ್ರಮವಾಗಿದೆ. ನಮಗೆ ಇಂತಹ ಅವಕಾಶ ಸಿಗುತ್ತಿರಲಿಲ್ಲ ಹಾಗಾಗಿ ಮಕ್ಕಳು ಇಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ನಾಡಿನ ಭಾಷೆಯನ್ನು ಉಳಿಸುವವರಾಗಬೇಕೆಂದು ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿ. ವೆಂಕಟರಮಣ ಬೋರ್ಕರ್ ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿಮುಖ್ಯ ಅತಿಥಿಗಳಾಗಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ  ಗೀತಾ. ಡಿ , ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಂಧ್ಯಾಲಕ್ಷ್ಮಿ, ಬೆಟ್ಟಂಪಾಡಿ ಸಿ. ಆರ್. ಪಿ. ಪರಮೇಶ್ವರಿ ಪ್ರಸಾದ್,ಸಂದರ್ಭೋಚಿತವಾಗಿ ಮಾತನಾಡಿದರು. ಸರ್ವಾಧ್ಯಕ್ಷತೆ ವಹಿಸಿದ "ಕು.ರಕ್ಷಿತಾ ಬಿ .ಸಾಹಿತ್ಯ ಸಮ್ಮೇಳನದ  ಸ್ವರೂಪ ಪಡೆದು ಸರಳವಾಗಿ ಪರಿಣಾಮಕಾರಿಯಾಗಿ ನಡೆಯುತ್ತಿರುವ ಈ ಗ್ರಾಮ ಸಾಹಿತ್ಯ ಸಂಭ್ರಮವು ಗ್ರಾಮೀಣ ಮಕ್ಕಳನ್ನು ಸಾಹಿತ್ಯ ಲೋಕಕ್ಕೆ ಬರಮಾಡಿಕೊಳ್ಳುವಲ್ಲಿ   ಪೂರಕವಾಗಿದೆ  ಎಂದರು.


ಸಮಾರಂಭದ ಅಧ್ಯಕ್ಷತೆ ವಹಿಸಿ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಹಿತ್ಯದ ವೇದಿಕೆಯನ್ನು ನೀಡುವುದು  ಹಾಗೂ  ಆ ಗ್ರಾಮದ ಸಾಧಕರನ್ನು ಗುರುತಿಸಿ ಗೌರವಿಸುವ ನಿಟ್ಟಿನಲ್ಲಿ   ಸಾಹಿತ್ಯ ಪರಿಷತ್ ಗ್ರಾಮ ಗ್ರಾಮಕ್ಕೆ ಬಂದು ಜನಸಾಮಾನ್ಯರನ್ನು  ತಲಪುವ ಕಾರ್ಯಕ್ರಮವೇ ಗ್ರಾಮ ಸಾಹಿತ್ಯ ಸಂಭ್ರಮ ಎಂದರು".


ಅಭಿನಂದನಾ ಕಾರ್ಯಕ್ರಮ:

ನಿಡ್ಪಳ್ಳಿ ಗ್ರಾಮಕ್ಕೆ ಸಂಬಂಧಪಟ್ಟಂತೆ ಡಾ. ಸದಾಶಿವ ಭಟ್ ಪಳ್ಳು , ಶ್ರೀ. ರಘುನಾಥ ರೈ ನುಳಿಯಾಲು , ಶ್ರೀ. ಜನಾರ್ಧನ ದುರ್ಗ ,ಶ್ರೀ ಆಸೀಫ್ ತಂಬುತ್ತಡ್ಕ , ಶ್ರೀಮತಿ ಭವ್ಯಾ. ಪಿ. ಆರ್. ನಿಡ್ಪಳ್ಳಿ,ಕು. ಚಿತ್ರಾ. ಎಸ್. ಕು. ಸಮನ್ವಿ. ರೈ. ನುಳಿಯಾಲು ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ  ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ. ರಾಧಾಕೃಷ್ಣ ಬೋರ್ಕರ್ ಅಭಿನಂದಿಸಿ ಶುಭ ಹಾರೈಸಿದರು.


ಗ್ರಾಮ ಸಾಹಿತ್ಯ ಸಂಭ್ರಮದ ಸರ್ವಾಧ್ಯಕ್ಷರಾದ ಕು. ರಕ್ಷಿತಾ. ಬಿ ಅವರಿಗೆ ಕನ್ನಡ ಪೇಟ ತೊಡಿಸಿ ಸಮಾರೋಪ ಭಾಷಣಕಾರರಾದ ಕು. ಶ್ರೀಜ. ಕೆ ಯವರಿಗೆ ಕನ್ನಡ ಶಾಲು ಹಾಕಿ ವಾದ್ಯಘೋಷದೊಂದಿಗೆ ಮೆರವಣಿಗೆಯಲ್ಲಿ ವೇದಿಕೆಗೆ ಕರೆತರಲಾಯಿತು. ಸ ಹಿ. ಪ್ರಾ ಶಾಲೆ ಚೂರಿಪದವು ವಿದ್ಯಾರ್ಥಿಗಳಿಂದ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಚಿಗುರೆಲೆ ಬಳಗದ ಸದಸ್ಯರಾದ ಕು. ಚಿತ್ರಾ. ಎಸ್ ಸ್ವಾಗತಿಸಿ, ಗ್ರಾಮ ಸಾಹಿತ್ಯ ಸಂಭ್ರಮ ಸಂಚಾಲಕರಾದ ಶ್ರೀ ನಾರಾಯಣ ಕುಂಬ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚಿಗುರೆಲೆ ಸಾಹಿತ್ಯ ಬಳಗದ


ನಿರ್ವಾಹಕರಾದ ಕು. ಅಪೂರ್ವ ಕಾರಂತ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಚಿಗುರೆಲೆ ಸಾಹಿತ್ಯ ಬಳಗದ ಸದಸ್ಯರಾದ ರಶ್ಮಿತಾ ಸುರೇಶ್ ಜೋಗಿಬೆಟ್ಟು ವಂದಿಸಿದರು.  ಶ್ರೀ ಚಂದ್ರ ಮೌಳಿ ಕಡಂದೇಲು ಸಹಕರಿಸಿದರು.


ಸಭಾ ಕಾರ್ಯಕ್ರಮದ ಬಳಿಕ ಸಾಹಿತ್ಯಕ್ಕೆ ನಿಡ್ಪಳ್ಳಿ ಗ್ರಾಮದ ಕೊಡುಗೆ ವಿಷಯ ಕುರಿತು ಲೇಖಕರು, ಚಿಂತಕರು ಆಗಿರುವ ಶ್ರೀ ನುಳಿಯಾಲು ರಾಧಾಕೃಷ್ಣ ರೈ  ಮಾತನಾಡಿದರು. ತದನಂತರ ಕನ್ನಡದಲ್ಲೂ ಐ ಎಸ್ ಎ ಎಸ್ ಬರೆಯಿರಿ ಅಭಿಯಾನ ವಿಷಯ ಮಾಹಿತಿ ಕುರಿತು ಕ. ಸಾ. ಪ. ಪುತ್ತೂರು ಐ ಎ ಎಸ್ ದರ್ಶನ ಇದರ ಪ್ರೇರಕ ಭಾಷಣಕಾರರಾದ ಶ್ರೀ ಪ್ರಣವ್ ಭಟ್ ರಿಂದ ನಡೆಯಿತು. 


ಬಾಲ ಕವಿಗೋಷ್ಠಿ, ಬಾಲ ಕಥಾಗೋಷ್ಠಿ, ಪ್ರವಾಸ ಕಥನ, ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆಯಿತು. ಬಾಲ ಕವಿಗೋಷ್ಠಿ ಅಧ್ಯಕ್ಷತೆಯನ್ನು ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಭವ್ಯಾ. ಪಿ. ಆರ್. ನಿಡ್ಪಳ್ಳಿ , ಬಾಲ ಕಥಾಗೋಷ್ಠಿ ಅಧ್ಯಕ್ಷತೆಯನ್ನು ಸ. ಪ್ರೌಢಶಾಲೆ ಬೆಟ್ಟಂಪಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ , ಸಾರ್ವಜನಿಕ ವಿಭಾಗದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಮಾ. ಉ. ಹಿ. ಪ್ರಾ. ಶಾಲೆ ಇಲ್ಲಿನ ಆಂಗ್ಲ ಭಾಷಾ ಶಿಕ್ಷಕ ಜನಾರ್ಧನ ದುರ್ಗ ವಹಿಸಿದ್ದರು. ಯುವ ಕವಿಗೋಷ್ಠಿಯಲ್ಲಿ ಸಮನ್ವಿ ರೈ ನುಳಿಯಾಲು, ಶೋಭಾ ಕಾಟುಕುಕ್ಕೆ,ಕು. ಭಾವನಾ. ಕೆ. ಜೆ. ಸುಜಯ ಸ್ವರ್ಗ, ಆನಂದ ರೈ ಅಡ್ಕಸ್ಥಳ,ಅಪೂರ್ವ ಕಾರಂತ್ ದರ್ಬೆ, ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಸ.. ಹಿ. ಪ್ರಾ ಶಾಲೆ ಮುಂಡೂರು. ಇದರ ವಿದ್ಯಾರ್ಥಿನಿ ಕು ಶ್ರೀಜ ಮಾತನಾಡಿದರು.ವಿವಿಧ ಗೋಷ್ಠಿಗಳ ನಿರೂಪಣೆಯನ್ನು ಸಾರ್ಥಕ್ ರೈ. ಟಿ, ಕು. ಚಿತ್ರಾ. ಎಸ್, ಅಪೂರ್ವ ಕಾರಂತ್, ಕು. ಶ್ರೀದೇವಿ, ಕು. ಚಾಂದಿನಿ ನಿರ್ವಹಿಸಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top