ಬಂಟ್ವಾಳ: ಮಂದಿರಗಳು ಪ್ರತಿಯೊಂದು ಊರಿನಲ್ಲಿಯೂ ಶ್ರದ್ಧಾಕೇಂದ್ರಗಳಾಗಿ ರೂಪುಗೊಳ್ಳಬೇಕು. ಅಯೋಧ್ಯೆಯಂತೆ ಬೆಳಗಬೇಕು. ಶ್ರೀ ರಾಮ ಎಲ್ಲರಿಗೂ ಆದರ್ಶವಾಗಬೇಕು. ಸಮಾಜದಲ್ಲಿ ಸಾಮರಸ್ಯವಾಗಿ ಸುಶಿಕ್ಷಿತರಾಗಬೇಕು ಎಂದು ಅವಧೂತ ಶ್ರೀ ವಿನಯ ಗುರೂಜಿ ಗೌರಿಗದ್ದೆಯವರು ನುಡಿದರು.
ಅವರು ಕಲ್ಲಡ್ಕ ಶ್ರೀರಾಮ ಮಂದಿರ ರಾಮನಗರದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ವಿದ್ಯಾಗಣಪತಿ ದೇವರ ಗುಡಿಗೆ ಶಿಲಾನ್ಯಾಸ ಸಂದರ್ಭದ ಧಾರ್ಮಿಕ ಸಭೆಯಲ್ಲಿ ಆಶೀರ್ಚನ ನೀಡಿದರು.
ಶ್ರೀ ರಾಮ ಕಾರುಣ್ಯ ಮೂರ್ತಿ. ಸದ್ಗುಣವಂತ. ಸೂರ್ಯವಂಶಜ. ಅವನ ಆದರ್ಶವನ್ನು ಮೈಗೂಡಿಸಿಕೊಂಡಿರುವ ಕಲ್ಲಡ್ಕ ಪ್ರಭಾಕರ ಭಟ್ಟರು ವಿದ್ಯಾಕೇಂದ್ರದ ಮೂಲಕ ಮಕ್ಕಳಲ್ಲಿ ಆದರ್ಶ ಸಂಸ್ಕೃತಿಯ ನ್ನು ಬೆಳೆಸುತಿದ್ದಾರೆ ಎಂದರು. ಕರಾವಳಿಯಲ್ಲಿ ದೈವಾರಾಧನಾ ಪದ್ಧತಿ ಕೌಟುಂಬಿಕ ಜೀವನವನ್ನು ಉಳಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅತಿಥಿಗಳಾಗಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರಿನ ಎಂ.ಆರ್.ಜಿ.ಗ್ರೂಪ್ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಮಾಜಿಸಚಿವ ಕೃಷ್ಣ ಜೆ.ಪಾಲೆಮಾರ್, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಉದ್ಯಮಿ ಸಂತೋಷ ಜಿ.ಶೆಟ್ಟಿ ದಲಂಬಿಲ ಮುಂಬಯಿ,ಅನಂತ ಮೂರ್ತಿ ಸಿರ್ಸಿ ಭಾಗವಹಿಸಿದ್ದರು.
ಶ್ರೀ ವಿನಯ ಗುರೂಜಿ ಶಿಲಾನ್ಯಾಸ ನೆರವೇರಿಸಿ ಶುಭಹಾರೈಸಿದರು. ಕಶೆಕೋಡಿ ಸೂರ್ಯ ಭಟ್ ಶಿಲಾನ್ಯಾಸ ವಿಧಿವಿಧಾನ ನೆರವೇರಿಸಿ ಕ್ಷೀರಾಭಿಷೇಕ ಮಾಡಿದರು. ಪ್ರಮುಖರಾದ ಪದ್ಮನಾಭ ಕೊಟ್ಟಾರಿ,ಶಂಬು ಶೆಟ್ಟಿ,ಟಿ.ಜಿ.ರಾಜಾರಾಮ ಭಟ್,ರಘುನಾಥ ಸೋಮಯಾಜಿ ,ನಾರಾಯಣ ಸೋಮಯಾಜಿ,ಬೃಜೇಶ್ ಚೌಟ ಮೊದಲಾದವರು ಪಾಲ್ಗೊಂಡರು. ಆರಂಭದಲ್ಲಿ ವಿನಯ ಗುರೂಜಿಯವರು ಡಾ.ಕಮಲಾ ಪ್ರಭಾಕರ ಭಟ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ಮಂದಿರದ ಪದಾಧಿಕಾರಿಗಳಾದ ನಾಗೇಶ ಕಲ್ಲಡ್ಕ, ಚೆನ್ನಪ್ಪ ಕೋಟ್ಯಾನ್, ಕ.ಕೃಷ್ಣ ಪ್ಪ, ಸುಜಿತ್ ಕೊಟ್ಟಾರಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಪ್ರಾಂಶುಪಾಲ ಕೃಷ್ಣ ಕುಮಾರ್ ಕಾಯರ್ಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ