ಭಾಷೆಯ ಉಳಿವು ಬಳಕೆಯಿಂದ ಮಾತ್ರ ಸಾಧ್ಯ: ಹೆಚ್. ಕೆ. ಪುಷ್ಪಲತಾ

Upayuktha
0



ಹಾಸನ : ಸ್ಪರ್ಧಾತ್ಮಕ ಯುಗದಲ್ಲಿ ಬೋಧನೆ ಮತ್ತು ಕಲಿಕೆ ನಿರಂತರ ಮತ್ತು ವ್ಯಾಪಕ ಪ್ರಕ್ರಿಯೆಗಳಾಗಿವೆ. ಭಾಷಾ ಬೋಧನೆ ಮತ್ತು ಭಾಷೆಯ ಕಲಿಕೆ ತರಗತಿ ಪ್ರಕ್ರಿಯೆಯಲ್ಲಿ  ಬಹಳ ಮುಖ್ಯವೆನಿಸುತ್ತವೆ. ವಿದ್ಯಾರ್ಥಿಗಳು ಭಾಷಾ ಬಳಕೆಯಲ್ಲಿ ಪ್ರಾವೀಣ್ಯತೆ ಪಡೆಯಲು ಶಿಕ್ಷಕರ ಪರಿಶ್ರಮ ಬಹಳಷ್ಟಿದೆ ಎಂದು ಹಾಸನದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಆದ ಹೆಚ್.ಕೆ. ಪುಷ್ಪಲತಾ ಹೇಳಿದರು. 



ಸರಿಸುಮಾರು ಎರಡು ವರ್ಷಗಳಿಂದ ಪ್ರತಿ ಶನಿವಾರ ವಿದ್ಯಾ ಪ್ರವೇಶ ಮತ್ತು ನಲಿ-ಕಲಿ ಜಿಲ್ಲಾ ತಂಡವು ಆಯೋಜಿಸಿ  ಡಯಟ್ ವತಿಯಿಂದ ನಡೆಸಲಾಗುತ್ತಿರುವ ಆನ್ಲೈನ್ ವಿಶೇಷ ಮಾಹಿತಿ ಹಂಚಿಕೆ ಕಾರ್ಯಕ್ರಮದಲ್ಲಿ ಮಾರ್ಗದರ್ಶಕರಾಗಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಸಕ್ತ ಇಪ್ಪತ್ತೊಂದನೇ ಶತಮಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಒಂದು ಸಂಪರ್ಕ ಭಾಷೆಯಾಗಿದ್ದು ಅದನ್ನು ವಿದ್ಯಾರ್ಥಿಗಳು ಕಲಿಯುವುದು ಮತ್ತು ಶಿಕ್ಷಕರು ಕಲಿಸುವುದು ಪ್ರಮುಖ ಜವಾಬ್ದಾರಿಯಾಗಿದೆ. ಭಾಷೆಯೊಂದರ ಉಳಿವು ಅದನ್ನು ಸಮರ್ಪಕವಾಗಿ ಬಳಸುವುದರಿಂದ ಮಾತ್ರ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಕಲಿಕಾ ಸಾಮರ್ಥ್ಯದ ಅಂತಃಸತ್ವ ಹೆಚ್ಚಾಗಿಯೇ ಇರುತ್ತದೆ. ಅದನ್ನು ಶಿಕ್ಷಕರು ಗುರ್ತಿಸಿ ಸರಿಯಾದ ಮಾರ್ಗದರ್ಶನ ಮತ್ತು ಸೂಕ್ತ ಸಲಹೆ ನೀಡಬೇಕು. ಆ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷೆಯ ಕಲಿಕೆಯಲ್ಲಿ ಮತ್ತು ಬಳಕೆಯಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಇಂಗ್ಲಿಷ್ ಭಾಷಾ ಕಲಿಕೆಗೆ ಸಂಬಂಧಿಸಿದಂತೆ ವ್ಯಾಕರಣಾಂಶಗಳನ್ನು ಅನುಕೂಲಿಸಿ ಕಲಿಸಬೇಕು. ನಿತ್ಯದ ಬದುಕಿನಲ್ಲಿ ಮಗು ಇಂಗ್ಲಿಷ್ ಭಾಷೆಯನ್ನು ಸುಲಲಿತವಾಗಿ ಮಾತನಾಡುವಂತೆ ಪ್ರೇರೇಪಿಸಬೇಕು ಎಂದರು.




ನಗರದ ಆರ್.ಸಿ. ರಸ್ತೆಯಲ್ಲಿರುವ ಜಿಜಿಜೆಸಿ ಪ್ರಧಾನ ಪ್ರೌಢಶಾಲೆಯ ಸಹ ಶಿಕ್ಷಕರಾದ ಕೆ.ಎನ್. ಚಿದಾನಂದ ರವರು ಸಂಪನ್ಮೂಲ ವ್ಯಕ್ತಿಯಾಗಿ ಆನ್ ಲೈನ್ ಕ್ಲಾಸ್ ನ್ನು ನಿರ್ವಹಣೆ ಮಾಡುತ್ತ ಶಿಕ್ಷಕರನ್ನು ಕುರಿತು ಇಂಗ್ಲಿಷ್ ಭಾಷೆಯು ಇಂದಿನ ಅತ್ಯಗತ್ಯ ಭಾಷೆಗಳಲ್ಲಿ ಒಂದಾಗಿದ್ದು ಭಾಷೆಯ ಮೂಲಕವೇ ಮಗು ವ್ಯಕ್ತಿತ್ವವನ್ನು  ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಂಗ್ಲಿಷ್ ಕೂಡಾ ಒಂದು ಭಾಷೆಯಾಗಿದ್ದು ಅದನ್ನು ಕಲಿಯಲು ಮೂಲ ಮತ್ತು ಅತ್ಯಗತ್ಯ ಪದಗಳನ್ನು ಶಿಕ್ಷಕರು ಅನುಕೂಲಿಸಬೇಕು. ಇಂದಿನ ತರಗತಿಯಲ್ಲಿ ವಿವಿಧ ಕಾಲಗಳಲ್ಲಿ ಕ್ರಿಯಾಪದಗಳನ್ನು ಅರ್ಥಗರ್ಭಿತವಾಗಿ ಹೇಗೆ ಉಪಯೋಗಿಸಬೇಕು ಎಂಬುದನ್ನು ಉದಾಹರಣೆಗಳೊಂದಿಗೆ ತಿಳಿಸಿದರು. ಭಾಷೆಯ ಪರಿಶುದ್ಧತೆಯನ್ನು ಮಗು ಕಲಿಯಲು ಇಂಗ್ಲಿಷ್ ನ ಈ ಅಧ್ಯಾಯಗಳು ಬಹಳ ಪ್ರಮುಖವಾಗಿದೆ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸ್ಪಷ್ಟತೆ, ನಿರ್ದಿಷ್ಟತೆ ಹಾಗೂ ನಿರರ್ಗಳತೆಯು ಹೆಚ್ಚು ಪರಿಣಾಮಕಾರಿ ಕಲಿಕೆಯನ್ನು ಉಂಟು ಮಾಡುತ್ತದೆ ಎಂದರು. 




ಹಾಸನ ತಾಲ್ಲೂಕಿನ ಜಿ.ಎಲ್.ಪಿ.ಎಸ್, ಕಣಜನಹಳ್ಳಿ ಶಾಲಾ  ಶಿಕ್ಷಕರಾದ ಲೋಕೇಶ್ ರವರು ತಾಂತ್ರಿಕವಾಗಿ ಆಯೋಜನೆ ಮಾಡಿದರು. ಶಿಕ್ಷಕರಾದ ಭವ್ಯರವರು ಎಲ್ಲರನ್ನು ಸ್ವಾಗತಿಸಿದರು. ಜಿ.ಹೆಚ್.ಪಿ.ಎಸ್ ಸುಂಡಹಳ್ಳಿ ಚನ್ನರಾಯಪಟ್ಟಣ ತಾಲೂಕಿನ ಶಿಕ್ಷಕರಾದ ಮಧು ರವರ ಕಾರ್ಯಕ್ರಮವನ್ನು ನಿರೂಪಿಸಿ, ಎಲ್ಲರನ್ನು ವಂದಿಸಿದರು. ರಾಜ್ಯದ ವಿವಿಧ ತಾಲ್ಲೂಕುಗಳು ಹಾಗೂ ಜಿಲ್ಲೆಗಳಿಂದ ಶಿಕ್ಷಕರು ಆನ್ ಲೈನ್ ಟೆಲಿಗ್ರಾಂ ಗ್ರೂಪ್ ನಲ್ಲಿ ಭಾಗವಹಿಸಿದ್ದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top