ಉಡುಪಿ: ಪುಲ್ವಾಮಾ ದಾಳಿಯಲ್ಲಿ ಮಡಿದ ವೀರ ಸೈನಿಕರಿಗೆ ನುಡಿ ನಮನ

Upayuktha
0



ಉಡುಪಿ : ಶ್ರೀ ಸಾಯಿ ಮುಖ್ಯ ಪ್ರಾಣ ದೇವಸ್ಥಾನ ದ್ವಾರಕಾಮಾಯಿ ಮಠ ಶ್ರೀ ಕ್ಷೇತ್ರ ಶಂಕರಪುರ ವತಿಯಿಂದ ಪುಲ್ವಾಮಾ ದಾಳಿಯ 5ನೇ  ವರ್ಷಾಚರಣೆ ಅಂಗವಾಗಿ ದಾಳಿಯಲ್ಲಿ ಮಡಿದ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವ ಕಾರ್ಯಕ್ರಮ ಅಜ್ಜರಕಾಡು ಯುದ್ಧ ಸ್ಮಾರಕ ಬಳಿ ಫೆ. 14ರಂದು ನಡೆಯಿತು. 


ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಶಂಕರ್ ಪುರ ಸಾಯಿ ಮುಖ್ಯಪ್ರಾಣ ದೇವಾಲಯದ ಶ್ರೀ ಸಾಯಿ ಈಶ್ವರ ಗುರೂಜಿ ಫೆ. 14ರಂದು ಪ್ರೇಮಿಗಳ ದಿನಾಚರಣೆ ಮಾಡುವುದು ಸರಿಯಲ್ಲ, ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ  ಪುಲ್ವಾಮಾ ದಾಳಿಯಲ್ಲಿ ವೀರ ಮರಣವನ್ನು ಅಪ್ಪಿದ 40 ಜನ ವೀರ ಸೈನಿಕರಿಗೆ ನುಡಿ ನಮನ ಸಲ್ಲಿಸುವುದು  ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.



 ಈ ಸಂದರ್ಭದಲ್ಲಿ  ಸಿ.ಆರ್.ಪಿ.ಎಫ್ ಹವಾಲ್ದಾರ್  ಮುರಳಿದರ್ .ಕೆ,   ಸಿ.ಆರ್.ಪಿ.ಎಫ್ ಎ.ಎಸ್.ಐ  ಕೇಶವ ಆಚಾರ್ಯ, ಉಡುಪಿ ಜಿಲ್ಲಾ ಹಿಂದೂ ಮಹಾಸಭಾ ಅಧ್ಯಕ್ಷರು  ಸಂತೋಷ್ ಉದ್ಯಾವರ, ರಾಘವೇಂದ್ರ ಭಕ್ತ, ಸುಧಾಕರ್ ಶೆಟ್ಟಿ,  ರಾಘವೇಂದ್ರ ಪ್ರಭು, ಕವಾ೯ಲು, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ.ಎಸ್. ಶೆಟ್ಟಿ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ  ಗೀತಾಂಜಲಿ ಸುವರ್ಣ , ಜಗದೀಶ್ ಶೆಟ್ಟಿ,  ಉದಯ ನಾಯ್ಕ್,, ವಿಜಯ ಕುಂದರ್, ವಾರಿಜ ಕಲ್ಮಾಡಿ, ಸತೀಶ್,  ವಿಘ್ನೇಶ್, ಪ್ರದೀಪ್, ನೀಲೇಶ್, ಅಜಯ್, ಸುದರ್ಶನ್,ಸುಪ್ರೀತಾ, ಲಕ್ಷ್ಮೀ ಮುಂತಾದವರಿದ್ದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top