ಉಡುಪಿ: ಇಂದು ಉಪಲೋಕಾಯುಕ್ತರ ಅಹವಾಲು ಸ್ವೀಕಾರ

Upayuktha
0

ಉಡುಪಿ: ಉಡುಪಿ ನಗರದ ಮಣಿಪಾಲನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ  ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ ಉಪಲೋಕಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನಡೆಸಲಿದ್ದು ಸದರಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಯನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಯಿತು. 


ಉಪಲೋಕಯುಕ್ತರು ಫೆಬ್ರವರಿ 3 ರಂದು 10 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆಯ ವರೆಗೆ ಸಾರ್ವಜನಿಕರಿಂದ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಸರ್ಕಾರದ ಕೆಲಸ ಮಾಡಲು ವೀಳಂಬ ಮಾಡುತ್ತಿದರೆ ತೊಂದರೆ ನೀಡುತ್ತಿದರೆ ಸಾರ್ವಜನಿಕರು ಲಿಖಿತವಾಗಿ ಅಹವಾಲುವನ್ನು ನೀಡಿ ಪರಿಹಾರ ಪಡೆಯಬಹುದಾಗಿದೆ. ಸಾರ್ವಜನಿಕರು ನೀಡಿದ ಅರ್ಜಿಗಳನ್ನು ಸ್ವೀಕರಿಸಲು ರಜತಾದ್ರಿ ಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ಹೊರಂಗಣದಲ್ಲಿ ಮೂರು ಪ್ರತ್ಯೇಕ ಕೌಂಟರ್ ಗಳನ್ನು ತೆರೆಯಲಾಗಿದೆ. ಇಲಾಖೆಗಳಿಗೆ ಸಂಬಂಧಿಸಿದಂತೆ ದೂರುಗಳು ಇದ್ದಲ್ಲೀ ಪ್ರತ್ಯೇಕವಾಗಿ ಅರ್ಜಿಗಳನ್ನು ಸಾರ್ವಜನಿಕರು ನೀಡಬಹುದಾಗಿದೆ, ಪ್ರತಿಯೊಂದು ಅರ್ಜಿಗೂ ಪ್ರತ್ಯೇಕ ಟೋಕನ್ ನಂಬರ್ ಅನ್ನು ನೀಡುವುದರೊಂದಿಗೆ ಕಂಪ್ಯೂಟರ್ ಮೂಲಕ ದಾಖಲೀಕರಣಗೊಳಿಸಿಕೊಳ್ಳಲಾಗುವುದು ಇದಕ್ಕೆ ಅಗತ್ಯವಿರುವ ಕಂಪ್ಯೂಟರ್‌ಗಳನ್ನು ಜೋಡಿಸಲಾಗಿದೆ. ಟೋಕನ್ ನಂಬರ್ ಆಧಾರಿತವಾಗಿ ಅರ್ಜಿಗಳನ್ನು ಕರೆದು ವಿಚಾರಣೆಯನ್ನು ನಡೆಸಲಾಗುವುದು. ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಹೆಲ್ಪ್ ಡೆಸ್ಕ್ನ್ನು ಸಹ ತೆರೆಯಲಾಗಿದೆ. 

 

ಈಗಾಗಲೇ ಪ್ರತಿ ಕೌಂಟರ್ ಗೆ ಇಬ್ಬರಂತೆ ಜಿಲ್ಲಾಧಿಕಾರಿಗಳ ಕಛೇರಿಯ ಸಿಬ್ಭಂದಿಗಳನ್ನು ನಿಯೋಜಿಸಲಾಗಿದೆ ಇವುಗಳ ಮೇಲುಸ್ತುವರಿ ನೋಡಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಮಾಧ್ಯಮದವರಿಗೆ ಕೂರಲು ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. 


ಸಾರ್ವಜನಿಕರು ಸರ್ಕಾರಿ ಕೆಲಸಗಳಲ್ಲಿ ವಿಳಂಬ ತೊಂದರೆ ಅಥವಾ ದುರಾಡಳಿತಕ್ಕೆ ಒಳಗಾಗಿದ್ದರೆ ಈ ಅಹವಾಲು ಸ್ವೀಕರದ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

  


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top