ಮಂಗಳೂರು: ನಗರದ ಬೋಳೂರು ಅಮೃತಾನಂದಮಯಿ ಮಠದ ಆಶ್ರಯದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಹಾಗೂ ಬಳಗದವರಿಂದ ಯೋಗತರಬೇತಿ ಶಿಬಿರವನ್ನು ಇಂದು (ಫೆ.19) ಉದ್ಘಾಟಿಸಲಾಯಿತು. ಮಠದ ದೇವಸ್ಥಾನ ಸಮಿತಿ ಸದಸ್ಯರಾದ ಮುರಳೀಧರ್ ಶೆಟ್ಟಿಯವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶರೀರ ಹಾಗೂ ಮನಸ್ಸಿನ ಸ್ವಾಸ್ಥ್ಯ ರಕ್ಷಣೆಯೊಂದಿಗೆ ದೀರ್ಘಾಯುಷ್ಯ ಹೊಂದಲು ಯೋಗ ಬಹಳ ಸರಳ ವಿಧಾನ. ಗೋಪಾಲಕೃಷ್ಣ ದೇಲಂಪಾಡಿಯವರು ಸಾರ್ವಜನಿಕರ ಹಿತದೃಷ್ಟಿಯಿಂದ ಹಲವಾರು ವರ್ಷಗಳಿಂದ ಶಿಬಿರಗಳನ್ನು ನಡೆಸುತ್ತಿದ್ದಾರೆ. ಅವರ ಈ ಸೇವೆ ಎಲ್ಲರಿಗೂ ಮಾದರಿಯಾಗಲಿ ಎಂದು ಹೇಳಿದರು.
ಪ್ರಾರಂಭದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತಾಡಿದ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತಕುಮಾರ್ ಪೆರ್ಲ ಅವರು, ಮಾತಾ ಅಮೃತಾನಂದಮಯಿ ಮಠವು ಸಾಮಾಜಿಕ ಸ್ವಾಸ್ಥ್ಯ ರಕ್ಷಣೆಯ ಉದ್ದೇಶದಿಂದ ನಡೆಸುತ್ತಿರುವ ಕಾರ್ಯಕ್ರಮಗಳಲ್ಲಿ ಯೋಗವೂ ಪ್ರಮುಖವಾಗಿದೆ. ದೇಲಂಪಾಡಿ ಪ್ರತಿಷ್ಠಾನದ ಜೊತೆಗೆ ನಡೆಸುತ್ತಿರುವ ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತಾಗಬೇಕು ಎಂದರು.
ಡಾ.ದೇವದಾಸ್ ಪುತ್ರನ್ ವಂದಿಸಿದರು. ಸೇವಾ ಸಮಿತಿಯ ಪದಾಧಿಕಾರಿಗಳಾದ ಭರತ್ ಕುಮಾರ್ ಎರ್ಮಾಳ್, ನಿರಂಜನ್ ಅಡ್ಯಂತಾಯ, ಆಯುಷ್ ವೈದ್ಯಾಧಿಕಾರಿ ಡಾ.ಶ್ರೀದೇವಿ, ಶ್ರೀಮತಿ ವೀಣಾ ಮಾರ್ಲ, ಭಾರತಿ ಎಸ್.ರಾವ್, ಕುಮಾರ್ ಶೆಣೈ, ಸ್ಕಂದ, ದಾಮೋದರ್, ಹಾಗೂ ಗೋಪಾಲಕೃಷ್ಣ ದೇಲಂಪಾಡಿಯವರ ಶಿಷ್ಯರು ಮತ್ತು ಅಮ್ಮನ ಭಕ್ತರು ಭಾಗವಹಿಸಿದ್ದರು.ಯೋಗ ತರಬೇತಿಯನ್ನು ಪಡೆಯಲು ಆಸಕ್ತರಿಗೆ ಪ್ರವೇಶಾವಕಾಶ ಇರುತ್ತದೆ. ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ನೋಂದಣಿ ಮಾಡಬಹುದಾಗಿದೆ ಎಂದು ಡಾ.ವಸಂತಕುಮಾರ್ ಪೆರ್ಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ