ಅಗಲ್ಪಾಡಿ ಯಾಗ: ಐಕ್ಯಮತ್ಯ ಹೋಮ ಪೂರ್ಣಾಹುತಿ

Upayuktha
0


ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳ ಎರಡನೇ ದಿನವಾದ ಗುರುವಾರ ಬೆಳಗ್ಗೆ ಕಲಶ ಸ್ಥಾಪನೆಯಾಗಿ ಐಕ್ಯಮತ್ಯ ಹೋಮ ನಡೆಯಿತು. ಮಧ್ಯಾಹ್ನ ಐಕ್ಯಮತ್ಯ ಹೋಮದ ಪೂರ್ಣಾಹುತಿ ನಡೆಯಿತು.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಚಿನ್ಮಯಿ ವಿ.ಭಟ್ ಬೇಂದ್ರೋಡು ಮತ್ತು ಸುಮನಾ ಕೆ.ದರ್ಭೆ ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ, ಅಗಲ್ಪಾಡಿ ಪಾಂಚಜನ್ಯ ಬಾಲಗೋಕುಲ ಕುಣಿತಾ ಭಜನಾ ತಂಡದಿಂದ ಕುಣಿತ ಭಜನೆ, ವಾಣಿಶ್ರೀ ಬೆಂಗಳೂರು ಅವರಿಂದ ಭರತನಾಟ್ಯ ಕಾರ್ಯಕ್ರಮಗಳು ನಡೆಯಿತು.


ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜಿ.ಶರ್ಮಾ ಕೋಳಿಕ್ಕಜೆ, ಅಗಲ್ಪಾಡಿ ವೇದಮಾತಾ ಟ್ರಸ್ಟ್ ಅಧ್ಯಕ್ಷ ತಲೇಕ ಸುಬ್ರಹ್ಮಣ್ಯ ಭಟ್, ಕ್ಷೇತ್ರದ ಮೊಕ್ತೇಸರರು, ನಾನಾ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.


ಮಾ.29ರ ಕಾರ್ಯಕ್ರಮ

ಮಾ.29ರಂದು ಬೆಳಗ್ಗೆ 7 ಗಂಟೆಗೆ ರುದ್ರ ಹೋಮ ಆರಂಭ ಹಾಗೂ ಸಹಸ್ರ ಚಂಡಿಕಾಯಾಗಶಾಲಾ ಪ್ರವೇಶ, ಗುರುಗಣಪತಿ ಪೂಜೆ, ಮಹಾ ಸಂಕಲ್ಪ, ಆಚಾರ್ಯಾದಿ ಋತ್ವಿಕ್‍ವರಣ, ಮಂಟಪ ಸಂಸ್ಕಾರ, ಪ್ರಧಾನ ಧ್ವಜಾರೋಹಣ, ಪ್ರಧಾನ ಪೀಠದಲ್ಲಿ ಕಲಶ ಸ್ಥಾಪನೆ, ದುರ್ಗಾ ಸಪ್ತಶತೀ ಪಾರಾಯಣ ಆರಂಭ, ಬೆಳಗ್ಗೆ 11 ಗಂಟೆಗೆ ರುದ್ರ ಹೋಮ ಪೂರ್ಣಾಹುತಿ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ 8 ರಿಂದ ಪುತ್ತೂರಿನ ಯೋಗೀಶ್ವರಿ ಜಯಪ್ರಕಾಶ್ ಅವರ ವೈಷ್ಣವಿ ನಾಟ್ಯಾಲಯದ ಬದಿಯಡ್ಕ ಶಾಖೆ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top