ಏಳು ದಿನ ಏಳು ಸ್ವಾಮೀಜಿಗಳಿಂದ ಪ್ರವಚನ ಮಾಲಿಕೆ, ಸಂಸ್ಥಾನ ಪೂಜೆ, ಭೂತರಾಜರ ಪೂಜೆ
ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಮಲ್ಲೇಶ್ವರದ ಈಜುಕೊಳದ ಬಡಾವಣೆಯ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 'ಕಲಿಯುಗ ಕಾಮಧೇನು' ಶ್ರೀ ರಾಘವೇಂದ್ರ ಗುರುಸಾರ್ವಭೌಮರ 402ನೇ ಪಟ್ಟಾಭಿಷೇಕ ಮತ್ತು 428ನೇ ವರ್ಧಂತ್ಯುತ್ಸವ ನಡೆಯಲಿದೆ.
ಆ ಪ್ರಯುಕ್ತ ಮಾರ್ಚ್ 11 ರಿಂದ 17ರ ವರೆಗೆ ಒಟ್ಟು ಏಳು ದಿನಗಳ ಕಾಲ ಪ್ರತಿ ದಿನ ಒಬ್ಬೊಬ್ಬ ಸ್ವಾಮೀಜಿಗಳಿಂದ ಪ್ರವಚನ ಏರ್ಪಡಿಸಿದ್ದು ಅವುಗಳ ವಿವರಗಳು ಈ ರೀತಿ ಇವೆ:
ಮಾರ್ಚ್ 11: ಬೆಳಗ್ಗೆ ಸೋಂದಾ ಶ್ರೀ ವಾದಿರಾಜ ಮಠದ ಪರಮಪೂಜ್ಯ ಶ್ರೀಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳವರಿಂದ ಸಂಸ್ಥಾನ ಪೂಜೆ, ಭೂತರಾಜರ ಪೂಜೆ, ಸಂಜೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಆಶೀರ್ವಚನ.
ಮಾರ್ಚ್ 12 ರಿಂದ 17ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಪ್ರವಚನ ಕಾರ್ಯಕ್ರಮ, ಕ್ರಮವಾಗಿ: ತಂಬಿಹಳ್ಳಿ ಮಠಾಧೀಶರಾದ ಪರಮಪೂಜ್ಯ ಶ್ರೀಶ್ರೀ ಮಾಧವತೀರ್ಥರು, ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥರು, ಶ್ರೀ ಕಾಣಿಯೂರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥರು, ಶ್ರೀ ಕುಕ್ಕೆಸುಬ್ರಹ್ಮಣ್ಯಮಠದ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನತೀರ್ಥರು, ಪರಮಪೂಜ್ಯ ಶ್ರೀ ಶ್ರೀ ಸುವಿದ್ಯೇಂದ್ರತೀರ್ಥರು ಹಾಗೂ ಶ್ರೀ ಭೀಮನಕಟ್ಟೆಮಠದ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ರಘುವರೇಂದ್ರತೀರ್ಥರು ಇವರುಗಳಿಂದ ಧಾರ್ಮಿಕ ಪ್ರವಚನ ಮಾಲಿಕೆಯನ್ನು ಏರ್ಪಡಿಸಿದೆ ಎಂದು ಮಠದ ಗೌರವ ಕಾರ್ಯದರ್ಶಿ ಎಚ್. ನರಹರಿ ರಾವ್ ಅವರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ