ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಿರುತ್ತದೆ: ಹೆಚ್.ಕೆ. ಪುಷ್ಪಲತಾ

Upayuktha
0


ಹಾಸನ: ಮಕ್ಕಳಲ್ಲಿ ಭಾಷೆಯ ಕಲಿಕಾ ಸಾಮರ್ಥ್ಯ ಹೆಚ್ಚಿರುತ್ತದೆ. ಶಿಕ್ಷಕರು ಸೂಕ್ತ ರೀತಿಯಲ್ಲಿ ವಿಭಿನ್ನ ಹಾಗೂ ವೈವಿಧ್ಯಮಯ ಚಟುವಟಿಕೆಗಳನ್ನು ರೂಪಿಸುವ ಮೂಲಕ ಮಕ್ಕಳಿಗೆ ಭಾಷೆಯನ್ನು ಬಳಸಲು ಪ್ರೋತ್ಸಾಹಿಸಬೇಕು. ಭಾಷೆಯ ಬಳಕೆಯನ್ನು ವಿದ್ಯಾರ್ಥಿಗಳಿಗೆ ತಿದ್ದಿ ತಿಳಿವಳಿಕೆ ಮೂಡಿಸಬೇಕು ಎಂದು ಹಾಸನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕಿ (ಅಭಿವೃದ್ಧಿ)  ಹೆಚ್.ಕೆ. ಪುಷ್ಪಲತಾ ಹೇಳಿದರು.



ಸರಿಸುಮಾರು ಎರಡೂವರೆ ವರ್ಷಗಳಿಂದ ಪ್ರತಿ ಶನಿವಾರ ಹಾಸನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ವತಿಯಿಂದ ನಡೆಸಲಾಗುತ್ತಿರುವ ಆನ್ಲೈನ್ ವಿಶೇಷ ಮಾಹಿತಿ ಹಂಚಿಕೆ ಕಾರ್ಯಕ್ರಮದಲ್ಲಿ ಮಾರ್ಗದರ್ಶಕರಾಗಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಯಾವುದೇ ಒಂದು ಭಾಷೆಯ ಉಳಿವಿನಲ್ಲಿ ಆ ಭಾಷೆಯನ್ನು ಬಳಸುವವರ ಪಾತ್ರ ಹೆಚ್ಚಾಗಿರುತ್ತದೆ. ಏಕೆಂದರೆ ಭಾಷೆಯ ಕಲಿಕೆ ಮತ್ತು ಉಳಿಯುವಿಕೆಯು ಅದರ ಬಳಕೆಯಿಂದ ಮಾತ್ರ ಸಾಧ್ಯವಾಗುತ್ತದೆ. ಈ ಹಿನ್ನಲೆಯಲ್ಲಿ ಇಂಗ್ಲಿಷ್ ವ್ಯಾಕರಣ ಸಹಿತ ಭಾಷಾ ಬಳಕೆಯ ಸೌಲಭ್ಯವನ್ನು ನಮ್ಮ ಹಾಸನ ಡಯಟ್ ವತಿಯಿಂದ ಮಾಡಿಕೊಡಲಾಗುತ್ತಿದೆ. ಇದನ್ನು ಜಿಲ್ಲೆಯ ಎಲ್ಲಾ ಶಿಕ್ಷಕರು ಬಳಕೆ ಮಾಡಿಕೊಂಡು ತರಗತಿ ಕೋಣೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲಿಸಿದರೆ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಉತ್ತಮ ರೀತಿಯಲ್ಲಿ ಕಾಯ್ದುಕೊಳ್ಳಲು ನೆರವಾಗುತ್ತದೆ. ಪ್ರಸ್ತುತತೆಯ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಒಂದು ಆಸಕ್ತಿಯ ಮತ್ತು ಸಂಪರ್ಕ ಭಾಷೆಯಾಗಿದ್ದು ಅದನ್ನು ವಿದ್ಯಾರ್ಥಿಗಳು ಕಲಿಯುವುದು ಮತ್ತು ಶಿಕ್ಷಕರು ಕಲಿಸುವುದು ಪ್ರಮುಖ ಕರ್ತವ್ಯವೇ ಆಗಿದೆ. ನಿತ್ಯದ ಬದುಕಿನಲ್ಲಿ ಮಗು ಇಂಗ್ಲಿಷ್ ಭಾಷೆಯನ್ನು ಸುಲಲಿತವಾಗಿ ಮಾತನಾಡುವಂತೆ ಶಿಕ್ಷಕರು ಪ್ರೇರೇಪಿಸಬೇಕು. ಈ ನಿಟ್ಟಿನಲ್ಲಿ ಇಂದಿನ ಆಂಗ್ಲಭಾಷಾ ಸಂಪನ್ಮೂಲ ವ್ಯಕ್ತಿಗಳಾದ ಕೆ.ಎನ್. ಚಿದಾನಂದ ರವರು ಅತ್ಯುತ್ತಮವಾಗಿ ಸರಣಿ ತರಗತಿಗಳನ್ನು ನಿರ್ವಹಣೆ ಮಾಡಿದ್ದು ಇಂಗ್ಲಿಷ್ ಭಾಷಾ ಕಲಿಕೆಯನ್ನು ಅತ್ಯಂತ ಸರಳವಾಗಿ ಸುಲಭವಾಗಿ ಕಲಿಸುವ ವಿಧಾನಗಳನ್ನು ಎಲ್ಲ ಸುಗಮಕಾರರಿಗೂ ಅರ್ಥವಾಗುವಂತೆ ಹೇಳಿಕೊಡುತ್ತಾರೆ ಎಂದು ಹೇಳಿದರು.



ನಗರದ ಆರ್.ಸಿ. ರಸ್ತೆಯಲ್ಲಿರುವ ಜಿಜಿಜೆಸಿ ಪ್ರಧಾನ ಪ್ರೌಢಶಾಲೆಯ ಸಹ ಶಿಕ್ಷಕರಾದ ಕೆ.ಎನ್. ಚಿದಾನಂದ ರವರು ಸಂಪನ್ಮೂಲ ವ್ಯಕ್ತಿಯಾಗಿ ಆನ್ ಲೈನ್ ಕ್ಲಾಸ್ ನ್ನು ನಿರ್ವಹಣೆ ಮಾಡುತ್ತ ಶಿಕ್ಷಕರನ್ನು ಕುರಿತು ಮಾತನಾಡುತ್ತಾ ವರ್ತಮಾನ ಕಾಲದ ಪೋಷಕರು ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಕಳುಹಿಸಲು ಇಚ್ಚಿಸುತ್ತಿದ್ದಾರೆ. ನಮ್ಮ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ಮತ್ತು ಇಂಗ್ಲಿಷ್ ಭಾಷೆಯನ್ನು ಸೂಕ್ತ ರೀತಿಯಲ್ಲಿ ಅನುಕೂಲಿಸುವ ಮೂಲಕ ನಮ್ಮ ಶಾಲೆಗಳನ್ನು ದಾಖಲಾತಿಗಳನ್ನು ಹೆಚ್ಚಿಸಿಕೊಳ್ಳಲು ಮತ್ತು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.

ಶಿಕ್ಷಕರಾದ ನಾವು ವಿದ್ಯಾರ್ಥಿಗಳಲ್ಲಿ ಭಾಷೆಯ ಕಲಿಕೆಯಲ್ಲಿ ಮತ್ತು ಬಳಕೆಯಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಇಂಗ್ಲಿಷ್ ಭಾಷಾ ಕಲಿಕೆಗೆ ಸಂಬಂಧಿಸಿದಂತೆ ವ್ಯಾಕರಣಾಂಶಗಳನ್ನು ಅನುಕೂಲಿಸಿ ಕಲಿಸಬೇಕು. ಇಂದಿನ ತರಗತಿಯಲ್ಲಿ ವಿವಿಧ ಕಾಲಗಳಲ್ಲಿ ಯಸ್ ಅಥವಾ ನೋ (YES OR NO) ಪ್ರಶ್ನೆಗಳನ್ನು ಅರ್ಥಗರ್ಭಿತವಾಗಿ ಹೇಗೆ ಉಪಯೋಗಿಸಬೇಕು ಎಂಬುದನ್ನು ಉದಾಹರಣೆಗಳೊಂದಿಗೆ ತಿಳಿಸಿದರು. ಭಾಷೆಯ ಪರಿಶುದ್ಧತೆಯನ್ನು ಮಗು ಕಲಿಯಲು ಇಂಗ್ಲಿಷ್ ನ ಈ ಅಧ್ಯಾಯಗಳು ಬಹಳ ಪ್ರಮುಖವಾಗಿದೆ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸ್ಪಷ್ಟತೆ, ನಿರ್ದಿಷ್ಟತೆ ಹಾಗೂ ನಿರರ್ಗಳತೆಯು ಹೆಚ್ಚು ಪರಿಣಾಮಕಾರಿ ಕಲಿಕೆಯನ್ನು ಉಂಟು ಮಾಡುತ್ತದೆ ಎಂದರು.



ಹಾಸನ ತಾಲ್ಲೂಕಿನ ಜಿ.ಎಲ್.ಪಿ.ಎಸ್, ಕಣಜನಹಳ್ಳಿ ಶಾಲಾ ಶಿಕ್ಷಕ ಲೋಕೇಶ್ ರವರು ತಾಂತ್ರಿಕವಾಗಿ ಆಯೋಜನೆ ಮಾಡಿದರು. ಅರಸಿಕೆರೆ ತಾಲೂಕಿನ ಜಿ.ಹೆಚ್.ಪಿ.ಎಸ್. ಜಿ. ಶಂಕರನಹಳ್ಳಿ ಶಾಲಾ ಶಿಕ್ಷಕಿ ಕೆ.ಎಸ್. ಮದುಮತಿ  ರವರು ಸರ್ವರನ್ನು ಸ್ವಾಗತಿಸಿದರು. ಜಿ.ಆರ್.ಮದುಮತಿ ಕಾರ್ಯಕ್ರಮವನ್ನು ನಿರೂಪಿಸಿದರೆ, ಸಿ.ಡಿ. ಭಾರತಿರವರು ಪ್ರಾರ್ಥಿಸಿದರು ಮತ್ತು ರಮ್ಯರವರು ಎಲ್ಲರನ್ನು ವಂದಿಸಿದರು. ರಾಜ್ಯದ ವಿವಿಧ ತಾಲ್ಲೂಕುಗಳು ಹಾಗೂ ಜಿಲ್ಲೆಗಳಿಂದ ಶಿಕ್ಷಕರು ಆನ್ ಲೈನ್ ಟೆಲಿಗ್ರಾಂ ಗ್ರೂಪ್ ನಲ್ಲಿ ಭಾಗವಹಿಸಿ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top