ಸಮಾದೇಷ್ಟರು ಸುರತ್ಕಲ್ ಘಟಕ ಭೇಟಿ
ಮಂಗಳೂರು: ಬುಧವಾರದಂದು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಸುರತ್ಕಲ್ ಘಟಕಕ್ಕೆ ಭೇಟಿ ನೀಡಿ ಕವಾಯತು ವೀಕ್ಷಣೆ ನಡೆಸಿದರು. ಮುಂಬರುವ 2024ರ ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಹಾಗೂ ನಿಷ್ಕ್ರಿಯಗೊಂಡ ಗೃಹರಕ್ಷಕರನ್ನು ಮನವೊಲಿಸಿ ಚುನಾವಣೆಗೆ ನಿಯೋಜಿಸುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರು ಅಂಚೆ ಮೂಲಕ ಮತದಾನ ಮಾಡಲು ಚುನಾವಣಾ ಗುರುತಿನ ಚೀಟಿಯನ್ನು ಮತ್ತು ಭಾಗಸಂಖ್ಯೆಯನ್ನು ಘಟಕಾಧಿಕಾರಿಯವರಲ್ಲಿ ನೀಡುವಂತೆ ಆದೇಶಿಸಿದರು. ಸುರತ್ಕಲ್ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ರಮೇಶ್ ಹಾಗೂ ಸುರತ್ಕಲ್ ಘಟಕದ ಗೃಹರಕ್ಷಕರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ