ಹಾಸನ : ವಿದ್ಯೆ ಮತ್ತು ಜ್ಞಾನ ಸಂಪಾದನೆ ನಿರಂತರ ಪರಿಶ್ರಮದಿಂದ ಮಾತ್ರ ಸಾಧ್ಯ. ಇವೆರಡೂ ಸಾಧಕರ ಸ್ವತ್ತೇ ವಿನಃ ಸೋಮಾರಿಗಳದಲ್ಲ. ವಿದ್ಯೆ ಮತ್ತು ಜ್ಞಾನವನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಸಾಧಕರನ್ನಾಗಿಸಬೇಕು ಎಂದು ನಗರದ ಆರ್.ಸಿ. ರಸ್ತೆಯಲ್ಲಿರುವ ಜಿಜಿಜೆಸಿ ಪ್ರಧಾನ ಪ್ರೌಢಶಾಲೆಯ ಸಹ ಶಿಕ್ಷಕರು ಮತ್ತು ಆಂಗ್ಲ ಭಾಷಾ ಸಂಪನ್ಮೂಲ ವ್ಯಕ್ತಿ ಕೆ.ಎನ್. ಚಿದಾನಂದ ರವರು ಹೇಳಿದರು.
ಸರಿಸುಮಾರು ಎರಡು ವರ್ಷಗಳಿಂದ ಪ್ರತಿ ಶನಿವಾರ ವಿದ್ಯಾ ಪ್ರವೇಶ ಮತ್ತು ನಲಿ-ಕಲಿ ಜಿಲ್ಲಾ ತಂಡವು ಆಯೋಜಿಸಿ ಡಯಟ್ ಪ್ರಾಂಶುಪಾಲರಾದ ಹೆಚ್. ಕೆ. ಪುಷ್ಪಲತಾ ರವರ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿರುವ ಆನ್ಲೈನ್ ವಿಶೇಷ ಮಾಹಿತಿ ಹಂಚಿಕೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಸ್ತುತ ಸಮಕಾಲೀನ ಪ್ರಪಂಚದ ಇಪ್ಪತ್ತೊಂದನೇ ಶತಮಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಒಂದು ಸಂಪರ್ಕ ಭಾಷೆಯಾಗಿದ್ದು ಅದನ್ನು ವಿದ್ಯಾರ್ಥಿಗಳು ಕಲಿಯುವುದು ಮತ್ತು ಶಿಕ್ಷಕರು ಕಲಿಸುವುದು ಪ್ರಮುಖ ಜವಾಬ್ದಾರಿಯಾಗಿದೆ. ಇದನ್ನು ಎಲ್ಲಾ ಶಿಕ್ಷಕರಿಗೂ ಉಚಿತವಾಗಿ ದೊರೆಯುವಂತೆ ಸೌಲಭ್ಯ ಕಲ್ಪಿಸಿರುವುದು ಹಾಸನ ಡಯಟ್ ನ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ. ಇಂಗ್ಲಿಷ್ ಭಾಷೆಯು ಇಂದಿನ ಅತ್ಯಗತ್ಯ ಭಾಷೆಗಳಲ್ಲಿ ಒಂದಾಗಿದ್ದು ಭಾಷೆಯ ಮೂಲಕವೇ ಮಗು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ.
ಈ ನಿಟ್ಟಿನಲ್ಲಿ ಇಂಗ್ಲಿಷ್ ಕೂಡಾ ಒಂದು ಭಾಷೆಯಾಗಿದ್ದು ಅದನ್ನು ವಿದ್ಯಾರ್ಥಿಗಳು ಕಲಿಯಲು ಮೂಲ ಮತ್ತು ಅತ್ಯಗತ್ಯ ಪದಗಳನ್ನು ಶಿಕ್ಷಕರು ಅನುಕೂಲಿಸಬೇಕು. ಇಂದಿನ ತರಗತಿಯಲ್ಲಿ ವಿವಿಧ ಕಾಲಗಳಲ್ಲಿ ಕ್ರಿಯಾಪದಗಳನ್ನು ಅರ್ಥಗರ್ಭಿತವಾಗಿ ಹೇಗೆ ಉಪಯೋಗಿಸಬೇಕು ಎಂಬುದನ್ನು ಉದಾಹರಣೆಗಳೊಂದಿಗೆ ತಿಳಿಸಿದರು. ಭಾಷೆಯ ಪರಿಶುದ್ಧತೆಯನ್ನು ಮಗು ಕಲಿಯಲು ಇಂಗ್ಲಿಷ್ ನ ಈ ಅಧ್ಯಾಯಗಳು ಬಹಳ ಪ್ರಮುಖವಾಗಿದೆ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸ್ಪಷ್ಟತೆ, ನಿರ್ದಿಷ್ಟತೆ ಹಾಗೂ ನಿರರ್ಗಳತೆಯು ಹೆಚ್ಚು ಪರಿಣಾಮಕಾರಿ ಕಲಿಕೆಯನ್ನು ಉಂಟು ಮಾಡುತ್ತದೆ ಎಂದರು.
ಹಾಸನ ತಾಲ್ಲೂಕಿನ ಜಿ.ಎಲ್.ಪಿ.ಎಸ್, ಕಣಜನಹಳ್ಳಿ ಶಾಲಾ ಶಿಕ್ಷಕರಾದ ಲೋಕೇಶ್ ರವರು ತಾಂತ್ರಿಕವಾಗಿ ಆಯೋಜನೆ ಮಾಡಿದರು. ಶಿಕ್ಷಕರಾದ ಜಿ.ಆರ್.ಮಧುಮತಿ ಎಲ್ಲರನ್ನು ಸ್ವಾಗತಿಸಿದರು. ಜಿ.ಹೆಚ್.ಪಿ.ಎಸ್ ಪೇಟೆ ಬಾಣಾವರ ಅರಸಿಕೆರೆ ತಾಲೂಕಿನ ಶಿಕ್ಷಕರಾದ ರಾಧಾಮಣಿ ರವರು ಕಾರ್ಯಕ್ರಮವನ್ನು ನಿರೂಪಿಸಿದರೆ, ಶಿಕ್ಷಕಿ ಹೊನ್ನಾಂಬಿಕ ರವರು ಪ್ರಾರ್ಥಸಿದರು ಮತ್ತು ಶಿಕ್ಷಕರಾದ ರಮ್ಯ ರವರು ಎಲ್ಲರನ್ನು ವಂದಿಸಿದರು. ರಾಜ್ಯದ ವಿವಿಧ ತಾಲ್ಲೂಕುಗಳು ಹಾಗೂ ಜಿಲ್ಲೆಗಳಿಂದ ಶಿಕ್ಷಕರು ಆನ್ ಲೈನ್ ಟೆಲಿಗ್ರಾಂ ಗ್ರೂಪ್ ನಲ್ಲಿ ಭಾಗವಹಿಸಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ