ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರೀ ಪದವಿ ಪೂರ್ವ ಕಾಲೇಜು ನಡ ಇವರ ಸಹಯೋಗದಲ್ಲಿ ಶುಕ್ರವಾರದಂದು (ಮಾ.22) ನಡ ಸರಕಾರೀ ಪದವಿ ಪೂರ್ವ ಕಾಲೇಜಿನಿಂದ ನಡ ಗ್ರಾಮ ಪಂಚಾಯಿತಿಯ ಅಂಬೇಡ್ಕರ್ ಸಭಾಭವನದವರೆಗೆ ಮತದಾರರ ಜಾಗೃತಿ ಜಾಥಾವನ್ನು ನಡೆಸಲಾಯಿತು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗೀಶ್ ಸಭಾಧ್ಯಕ್ಷತೆ ವಹಿಸಿದ್ದರು. ಸ್ವೀಪ್ ಸಮಿತಿ ಸದಸ್ಯರಾದ ಶ್ರೀಮತಿ ದಿವ್ಯಾ, ಶ್ರೀಮತಿ ಶುಭ ಹಾಗೂ ಶಿವಪುತ್ರ ಸುಣಗಾರ ಮತದಾನದ ಮಹತ್ವದ ಬಗ್ಗೆ ವಿವರಿಸಿದರು. ಶ್ರೀಮತಿ ಶಿಲ್ಪಾ ಡಿ. ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಿರಣ್ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರ ಮತದಾರರು ಇದರ ಪ್ರಯೋಜನವನ್ನು ಪಡೆದುಕೊಂಡರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ