ಸನಾತನ ಸಂಸ್ಥೆಯ ವಿಶೇಷ ಲೇಖನ
ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ. ಮಾಘ ಕೃಷ್ಣ ಚತುರ್ದಶಿಯಂದು, ದೇವಲೋಕದಲ್ಲಿ (ಅಲ್ಲಿಯ ಕಾಲಗಣನೆಗನುಸಾರ ಪ್ರತಿ ದಿನ) ಶಿವನು ರಾತ್ರಿಯ ಒಂದು ಪ್ರಹರ ವಿಶ್ರಾಂತಿಯನ್ನು ಪಡೆಯುವಾಗ, ಅದು ಪೃಥ್ವಿಯ ಮೇಲೆ ವರ್ಷಕ್ಕೊಂದು ಸಲ ಮಹಾಶಿವರಾತ್ರಿ ಎಂದು ಆಚರಿಸಲಾಗುತ್ತದೆ.
ಮಹಾಶಿವರಾತ್ರಿ - ಮಹತ್ವ ಏನು ?
ಮಹಾಶಿವರಾತ್ರಿಯ ಕಾಲದಲ್ಲಿ ಶಿವತತ್ತ್ವದ ಕಾರ್ಯ ನಿಂತುಹೋಗುತ್ತದೆ ಅಂದರೆ ಆ ಸಮಯದಲ್ಲಿ ಶಿವನು ಧ್ಯಾನಾವಸ್ಥೆಯಿಂದ ಸಮಾಧಿ ಅವಸ್ಥೆಗೆ ಹೋಗುತ್ತಾನೆ. ಶಿವನ ಸಮಾಧಿಸ್ಥಿತಿ ಅಂದರೆ ಶಿವನು ತನಗಾಗಿ ಸಾಧನೆ ಮಾಡುವ ಕಾಲ. ಈ ಸಮಯದಲ್ಲಿ ತಿಳಿದೋ ತಿಳಿಯದೆಯೋ ಶಿವ ಪೂಜೆ-ಉಪಾಸನೆ ಮಾಡಿದ್ದಲ್ಲಿ, ಆ ಉಪಾಸನೆಯಲ್ಲಿ ಏನಾದರೂ ಕುಂದು ಕೊರತೆಯಿದ್ದರೂ, ಫಲ ಮಾತ್ರ 100 ಶೇ. ದೊರೆಯುತ್ತದೆ. ಮಹಾಶಿವರಾತ್ರಿಯ ದಿನ ಶಿವತತ್ತ್ವ ವು ಎಂದಿಗಿಂತ 1000 ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನ ಮಾಡುವ ಉಪಾಸನೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಶಿವ ತತ್ತ್ವದ ಲಾಭವೂ ಆಗುತ್ತದೆ.
ಈ ಕಾಲಾವಧಿಯಲ್ಲಿ ವಿಶ್ವದ ತಮೋಗುಣವನ್ನು ಶಿವತತ್ತ್ವ ಸ್ವೀಕರಿಸುವುದಿಲ್ಲ. ಆದುದರಿಂದ ವಿಶ್ವದಲ್ಲಿ ತಮೋಗುಣ ಬಹಳ ಹೆಚ್ಚಾಗುತ್ತದೆ. ಅದರ ಪರಿಣಾಮ ನಮ್ಮ ಮೇಲಾಗಬಾರದೆಂದು ಮಹಾಶಿವರಾತ್ರಿಯ ವ್ರತವನ್ನು ಕೈಗೊಂಡು ಶಿವತತ್ತ್ವವನ್ನು ಆಕರ್ಷಿಸಬೇಕು.
ಮಹಾಶಿವರಾತ್ರಿ ವ್ರತವನ್ನು ಹೇಗೆ ಮಾಡಬೇಕು ?
ಮಹಾಶಿವರಾತ್ರಿ ವ್ರತಕ್ಕೆ `ಉಪವಾಸ, ಪೂಜೆ ಮತ್ತು ಜಾಗರಣೆ' ಹೀಗೆ ಮೂರು ಅಂಗಗಳಾಗಿವೆ.
ಮಾಘ ಕೃಷ್ಣ ತ್ರಯೋದಶಿಯಂದು ಏಕಭುಕ್ತರಾಗಿರಬೇಕು (ಒಪ್ಪೊತ್ತಿನ ಊಟ ಮಾಡುವುದು). ಚತುರ್ದಶಿಯಂದು ಬೆಳಗ್ಗೆ ಮಹಾಶಿವರತ್ರಿ ವ್ರತದ ಸಂಕಲ್ಪವನ್ನು ಮಾಡಿ ಸಾಯಂಕಾಲ ನದಿಯಲ್ಲಿ ಅಥವಾ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ಸ್ನಾನ ಮಾಡಬೇಕು. ಭಸ್ಮ ಮತ್ತು ರುದ್ರಾಕ್ಷಿಗಳನ್ನು ಧರಿಸಬೇಕು. ಪ್ರದೋಷಕಾಲದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಬೇಕು. ಶಿವನ ಧ್ಯಾನವನ್ನು ಮಾಡಬೇಕು, ಆಮೇಲೆ ಷೋಡಶೋಪಚಾರ ಪೂಜೆಯನ್ನು ಮಾಡಿ ಭವ ಭಾವಿನಿ ಪ್ರೀತ್ಯರ್ಥ ತರ್ಪಣವನ್ನು ನೀಡಬೇಕು. ಶಿವನಿಗೆ 108 ಕಮಲಗಳನ್ನು ಅಥವಾ ಬಿಲ್ವಪತ್ರೆಗಳನ್ನು ನಾಮಮಂತ್ರ ಸಹಿತ ಅರ್ಪಿಸಬೇಕು. ಆಮೇಲೆ ಪುಷ್ಪಾಂಜಲಿಯನ್ನು ಅರ್ಪಿಸಿ ಅರ್ಘ್ಯ ನೀಡಬೇಕು. ಪೂಜೆ, ಸ್ತೋತ್ರಪಠಣ ಮತ್ತು ಮೂಲಮಂತ್ರ ಜಪದ ನಂತರ ಶಿವನ ಮಸ್ತಕದ ಮೇಲಿನ ಒಂದು ಹೂವನ್ನು ತಮ್ಮ ತಲೆಯ ಮೇಲಿಟ್ಟುಕೊಳ್ಳಬೇಕು ಮತ್ತು ಕ್ಷಮಾಯಾಚನೆ ಮಾಡಬೇಕು.
ಯಾಮಪೂಜೆ
ಶಿವರಾತ್ರಿಯಂದು ರಾತ್ರಿಯ ನಾಲ್ಕು ಪ್ರಹರಗಳಲ್ಲಿ ನಾಲ್ಕು ಪೂಜೆಗಳನ್ನು ಮಾಡಬೇಕೆಂಬ ವಿಧಾನವಿದೆ. ಅದಕ್ಕೆ `ಯಾಮಪೂಜೆ' ಎನ್ನುತ್ತಾರೆ. ಪ್ರತಿಯೊಂದು ಯಾಮಪೂಜೆಯಲ್ಲಿ ದೇವರಿಗೆ ಅಭ್ಯಂಗಸ್ನಾನ ಮಾಡಿಸಬೇಕು, ಅನುಲೇಪನ ಮಾಡಿ ಧೋತ್ರಾ, ಮಾವಿನ ಹಾಗೂ ಬಿಲ್ವದ ಎಲೆಗಳನ್ನು ಅರ್ಪಿಸಬೇಕು. ಅಕ್ಕಿಯ ಹಿಟ್ಟಿನ 26 ದೀಪಗಳನ್ನು ಮಾಡಿ ಅವುಗಳನ್ನು ದೇವರಿಗೆ ಬೆಳಗಬೇಕು. ಪೂಜೆಯ ನಂತರ 108 ದೀಪಗಳನ್ನು ದಾನ ಮಾಡಬೇಕು. ಪ್ರತಿಯೊಂದು ಪೂಜೆಯ ಮಂತ್ರಗಳು ಬೇರೆಬೇರೆಯಾಗಿರುತ್ತವೆ, ಅವುಗಳಿಂದ ಅರ್ಘ್ಯವನ್ನು ನೀಡಬೇಕು. ನೃತ್ಯ, ಗೀತೆ, ಕಥಾಶ್ರವಣ ಮುಂತಾದ ವಿಷಯಗಳಿಂದ ಜಾಗರಣೆಯನ್ನು ಮಾಡಬೇಕು. ಬೆಳಗ್ಗೆ ಸ್ನಾನ ಮಾಡಿ ಮತ್ತೊಮ್ಮೆ ಶಿವ ಪೂಜೆ ಮಾಡಬೇಕು. ಉಪವಾಸವನ್ನು ಬಿಡುವಾಗ ಬ್ರಾಹ್ಮಣಭೋಜನ ನೀಡಬೇಕು. ಆಶೀರ್ವಾದ ಪಡೆದುಕೊಂಡು ವ್ರತದ ಸಮಾಪ್ತಿ ಮಾಡಬೇಕು.
12, 14 ಅಥವಾ 24 ವರ್ಷ ಈ ವ್ರತವನ್ನು ಆಚರಿಸಿದ ನಂತರ ಅದರ ಉದ್ಯಾಪನೆ (ವ್ರತದ ಪರಿಹಾರ) ಯನ್ನು ಮಾಡಬೇಕು.
ಮಹಾಶಿವರಾತ್ರಿ ದಿನ ಇವನ್ನು ತಪ್ಪದೇ ಮಾಡಿ !
ದಿನವಿಡೀ ಶಿವನ ನಾಮಜಪ ಮಾಡಿ
ಸಾಧ್ಯವಾದರೆ ಶಿವಲಿಂಗಕ್ಕೆ ಅಭಿಷೇಕವನ್ನು ಮಾಡಿ
ಶಿವನಿಗೆ ಬಿಳಿ ಅಕ್ಷತೆ, ಬಿಳಿ ಹೂವು, ಬಿಲ್ವಪತ್ರೆ ಅರ್ಪಿಸಿ ಪೂಜೆ ಮಾಡಿ
ಶಿವನ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆಯಿರಿ
ಓಂ ನಮಃ ಶಿವಾಯ | ನಾಮವನ್ನು ಆದಷ್ಟು ಹೆಚ್ಚು ಜಪಿಸಿ !
ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿಗಿಂತ 1000 ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಶಿವತತ್ತ್ವದ ಲಾಭವು ಹೆಚ್ಚು ಪ್ರಮಾಣದಲ್ಲಿ ಸಿಗಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಓಂ ನಮಃ ಶಿವಾಯ| ನಾಮವನ್ನು ಆದಷ್ಟು ಹೆಚ್ಚು ಜಪಿಸಿ. ಈ ದಿನ ನಾಮಜಪವನ್ನು ಮಾಡುವ ಜೀವಕ್ಕೆ ಶಿವನ ಸೂಕ್ಷ್ಮ ಶಕ್ತಿ ಸಿಗುತ್ತದೆ.
(ಆಧಾರ ಗ್ರಂಥ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ `ಶಿವನ ಉಪಾಸನೆಯ ಹಿಂದಿನ ಶಾಸ್ತ್ರ')
ಸಂಗ್ರಹ
-ವಿನೋದ ಕಾಮತ್,
ರಾಜ್ಯ ವಕ್ತಾರರು, ಸನಾತನ ಸಂಸ್ಥೆ
(ಸಂಪರ್ಕ : 9342599299)
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ