ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಉಜಿರೆ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗೃಹೋಪಯೋಗಿ ವಸ್ತುಗಳ ತಯಾರಿ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಇತ್ತೀಚೆಗೆ ಆಯೋಜಿಸಲಾಯಿತು.
ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಮತ್ತು ವಿಜ್ಞಾನದಲ್ಲಿ ಆಸಕ್ತಿಯನ್ನುಂಟುಮಾಡುವ ಉದ್ದೇಶದೊ೦ದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಲೇಜಿನ ತೃತೀಯ ವಿಜ್ಞಾನ ಪದವಿಯ ರಸಾಯನಶಾಸ್ತ್ರ ವಿದ್ಯಾರ್ಥಿಗಳು ವಿಭಾಗ ಮುಖ್ಯಸ್ಥೆ ನಂದಾಕುಮಾರಿ ಕೆ. ಪಿ. ಅವರ ಮಾರ್ಗದರ್ಶನದಲ್ಲಿ, ದೈನ೦ದಿನ ಜೀವನದಲ್ಲಿ ಉಪಯೋಗಿಸುವ ವಸ್ತುಗಳಾದ ಟೂತ್ ಪೌಡರ್, ಸೋಪು, ಲಿಕ್ವಿಡ್ ಸೋಪು, ಡಿಟರ್ಜೆ೦ಟ್ ಪೌಡರ್, ನೋವು ನಿವಾರಕ ಕ್ರೀ೦ಗಳು, ಫಿನಾಯಿಲ್, ಸುಗ೦ಧ ದ್ರವ್ಯಗಳು ಇತ್ಯಾದಿ ವಸ್ತುಗಳನ್ನು ತಯಾರಿಸಲು ಬೇಕಾಗುವ ಕಚ್ಚಾ ವಸ್ತುಗಳು ಮತ್ತು ಅದಕ್ಕೆ ತಗಲುವ ವೆಚ್ಚದ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ರಸಾಯನಶಾಸ್ತ್ರ ಪ್ರಯೋಗಾಲಯದಲ್ಲಿ ಅವುಗಳನ್ನು ತಯಾರಿಸಿ ತೋರಿಸಿ, ಶಾಲಾ ವಿದ್ಯಾರ್ಥಿಗಳಿಂದಲೇ ಕೆಲವು ವಸ್ತುಗಳನ್ನು ತಯಾರಿಸಲು ಉತ್ತೇಜಿಸಲಾಯಿತು.
ರಸಾಯನಶಾಸ್ತ್ರ ವಿದ್ಯಾರ್ಥಿಗಳಾದ ವಿಘ್ನೇಶ್ ಮತ್ತು ತೇಜಸ್ ಕಾರ್ಯಾಗಾರದ ಉದ್ದೇಶ ಹಾಗೂ ಪ್ರಾಮುಖ್ಯ ತಿಳಿಸಿದರು. ಉಪನ್ಯಾಸಕಿ ದಿವ್ಯ ಕಾರ್ಯಕ್ರಮ ಸಂಯೋಜಿಸಿದರು. ಉಪನ್ಯಾಸಕಿಯರಾದ ಗಾನವಿ ಮತ್ತು ಸಂಗೀತ ಬಿ. ಸಹಕರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ