ಮಂಗಳೂರು: ವಿಶ್ವ ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಒಬ್ಬ ಮಗುವಿನ ವ್ಯಕ್ತಿತ್ವ ರೂಪಿಸಲು ತಾಯಿ ಬೇಕು. ಗಂಡನ ಯಶಸ್ಸಿಗೆ ಹೆಂಡತಿ ಅನಿವಾರ್ಯ ಮತ್ತು ಮನೆಯ ಶಾಂತಿ ಮತ್ತು ನೆಮ್ಮದಿ ವಾತಾವರಣಕ್ಕೆ ಮಹಿಳೆ ಅತೀಅಗತ್ಯ. ಹೀಗೆ ಒಬ್ಬ ಮಹಿಳೆ ಅಮ್ಮನಾಗಿ, ಸಹೋದರಿಯಾಗಿ, ಪತ್ನಿಯಾಗಿ, ಸೊಸೆಯಾಗಿ ಪುರುಷರ ಜೀವನದಲ್ಲಿ ಬಹುಮುಖ್ಯ ಭೂಮಿಕೆ ವಹಿಸುತ್ತಾರೆ. ಮಹಿಳೆ ದೈಹಿಕವಾಗಿ ಪುರುಷರಿಗಿಂತ ಬಲಾಡ್ಯವಲ್ಲದಿದ್ದರೂ, ಮಾನಸಿಕವಾಗಿ ಮಹಿಳೆ ಪುರುಷರಿಗಿಂತಲೂ ಬಲಶಾಲಿ, ಒತ್ತಡದ ಸನ್ನಿವೇಶವನ್ನು ನಿಭಾಯಿಸುವಲ್ಲಿ ಮಹಿಳೆ ಹೆಚ್ಚು ಯಶಸ್ವಿಯಾಗುತ್ತಾರೆ. ಒಂದು ಪರಿಪೂರ್ಣ ಮನೆ, ಕುಟುಂಬ, ಸಮಾಜ, ನಾಡು ಮತ್ತು ದೇಶ ಕಟ್ಟಬೇಕಾದಲ್ಲಿ ಮಹಿಳೆ ಅನಿವಾರ್ಯಳು. ತಮ್ಮ ಕುಟುಂಬ ನಿರ್ವಹಣೆ ಜೊತೆಗೆ ಗೃಹರಕ್ಷಕಿಯಾಗಿ ಕೆಲಸ ಮಾಡಿ ಸಮಾಜದ ಸ್ವಾಸ್ಥಕಾಪಾಡುವ ಮಹಿಳಾ ಗೃಹರಕ್ಷಕಿಯರ ಕೊಡುಗೆ ಅತೀಅಮೂಲ್ಯ ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ನುಡಿದರು.
ಬುಧವಾರದಂದು ಉಳ್ಳಾಲ ಘಟಕದ ಕವಾಯತು ನಡೆಯುವ ಆಡಂಕುದ್ರು ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಉಳ್ಳಾಲ ಘಟಕದ ಗೃಹರಕ್ಷಕಿ ಶ್ರೀಮತಿ ಯಶವಂತಿ, ಮೆಟಲ್ ಸಂಖ್ಯೆ 838 ಇವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿಯಾದ ಶ್ರೀ ಸುನಿಲ್ ಕುಮಾರ್ ಹಾಗೂ ಉಳ್ಳಾಲ ಘಟಕದ ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ