ವಿದ್ಯಾರ್ಥಿಗಳೇ ದೇಶದ ಉಜ್ವಲ ಭವಿಷ್ಯವನ್ನು ರೂಪಿಸುವ ರೂವಾರಿಗಳು

Upayuktha
0

ಯಶೋವನ ಉದ್ಘಾಟಿಸಿ ಶುಭ ಹಾರೈಸಿ ಡಾ. ಎಂ. ಮೋಹನ ಆಳ್ವ




ಉಜಿರೆ: ಯುವಜನತೆಯಾದ ವಿದ್ಯಾರ್ಥಿಗಳು ದೇಶದ ಉಜ್ವಲ ಭವಿಷ್ಯವನ್ನು ರೂಪಿಸುವ ರೂವಾರಿಗಳಾಗಿದ್ದು ಉತ್ತಮ ಜ್ಞಾನ ಮತ್ತು ಸಂಸ್ಕಾರವನ್ನು ಮೈಗೂಡಿಸಿಕೊಂಡು ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರಾಗಿ ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.


ಅವರು ಶನಿವಾರ ಉಜಿರೆಯಲ್ಲಿ ಔಷಧೀಯ ಗಿಡಮೂಲಿಕೆಗಳ “ಯಶೋವನ” ಉದ್ಘಾಟಿಸಿ ಮಾತನಾಡಿದರು.


ಕೀರ್ತಿಶೇಷ ಡಾ. ಬಿ. ಯಶೋವರ್ಮರು ವಿದ್ಯಾರ್ಥಿಗಳ ಮೇಲೆ ಅಪಾರ ಭರವಸೆ, ಪ್ರೀತಿ-ವಿಶ್ವಾಸ ಹೊಂದಿದ್ದರು. ವಿದ್ಯಾರ್ಥಿಗಳು ಕ್ರೀಡೆಗಳು, ಪಠ್ಯೇತರ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸೌಂದರ್ಯಪ್ರಜ್ಞೆ ಬೆಳೆಸಿಕೊಳ್ಳಬೇಕು. ದೇಶ, ಕಲೆ, ಸಾಹಿತ್ಯ, ಸಂಸ್ಕೃತಿ, ಪರಿಸರದ ಬಗ್ಯೆ ಕಾಳಜಿವಹಿಸಬೇಕು ಎಂದು ಸಲಹೆ ನೀಡಿದರು. ಸಂಶೋಧನಾ ಕಾರ್ಯದಲ್ಲಿಯೂ ಆಸಕ್ತಿವಹಿಸಬೇಕು ಎಂದು ಅವರು ಹೇಳಿದರು.


ಬಹುಮುಖ ಪ್ರತಿಭೆಯ ಯಶೋವರ್ಮರು ಹಿತ-ಮಿತ ಭಾಷಿಯಾಗಿದ್ದು ಹಾಸ್ಯಪ್ರಜ್ಞೆಯನ್ನೂ ಹೊಂದಿದ ಸಹೃದಯ ಸಾಹಿತಿಯೂ ಆಗಿದ್ದರು ಎಂದು ಅವರು ಅಭಿಪ್ರಾಯಪಟ್ಟರು.


ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಹಸಿರೇ ನಮ್ಮ ಉಸಿರಾಗಿದ್ದು ಪ್ರಕೃತಿ-ಪರಿಸರ ಸಂರಕ್ಷಣೆ ಬಗ್ಯೆ ಎಲ್ಲರೂ ಆಸಕ್ತಿವಹಿಸಬೇಕು. ಸಸ್ಯಶಾಸ್ತç ವಿಭಾಗದ ವಿದ್ಯಾರ್ಥಿಗಳು ಯಶೋವನ ನಿರ್ವಹಣೆಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.


ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸೋನಿಯಾಯಶೋವರ್ಮ, ಪ್ರೊ. ಎಸ್. ಸತೀಶ್ಚಂದ್ರ, ಮಂಗಳೂರು ವಿ.ವಿ. ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ, ಜಾನಪದ ವಿ.ವಿ. ಯ ಮಾಜಿ ಉಪಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.


ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ ಸ್ವಾಗತಿಸಿದರು. ಪ್ರೊ. ಶ್ರೀಧರ ಭಟ್ ಧನ್ಯವಾದವಿತ್ತರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top