ಪುತ್ತೂರು: ಚಿರಂತನ ಚ್ಯಾರಿಟೇಬಲ್ ಟ್ರಸ್ಟ್ ಸುರತ್ಕಲ್ ಇವರು ಆಯೋಜಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ವಿವೇಕಾನಂದ ಸಂಶೋಧನಾ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ, ಲಲಿತ ಕಲಾ ಸಂಘ ಮತ್ತು ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ಬಾನ್ಸುರಿ ವಾದನ ಕಾರ್ಯಕ್ರಮ ನೆರವೇರಿತು.
ಪೂರ್ವಾಹ್ನದ ರಾಗ ಆಹಿರ್ ಭೈರವ್ನಲ್ಲಿ ಆಲಾಪ್, ಮಧ್ಯಲಯ್ ರೂಪಕ್ ಹಾಗೂ ದೃತ್ ತೀನ್ ತಾಳದ ಸಂಯೋಜನೆ ಹಾಗೂ ಅಪರಾಹ್ನದ ರಾಗವಾದ ಬೃಂದಾವನಿ ಸಾರಂಗ್ ರಾಗವನ್ನು ದೃತ್ ಹಾಗೂ ಅತಿ ದೃತ್ ತೀನ್ ತಾಳದಲ್ಲಿ ಮನೋಹರವಾದ ಬಾನ್ಸುರಿ ವಾದನ ಕಾರ್ಯಕ್ರಮ ನಡೆಯಿತು. ಬಾನ್ಸುರಿ ವಾದನದಲ್ಲಿ ಮಾಸ್ಟರ್ ಕಾರ್ತಿಕ್ ಭಟ್ ಮಂಗಳೂರು, ತಬಲಾದಲ್ಲಿ ಮಾಸ್ಟರ್ ಹೇಮಂತ ಜೋಶಿ ಧಾರವಾಡ ಅತ್ಯುತ್ತಮವಾದ ಕಚೇರಿ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಮತ್ತು ಪರೀಕ್ಷಾಂಗ ಕುಲಸಚಿವರಾದ ಹೆಚ್. ಜಿ ಶ್ರೀಧರ್, ಚಿರಂತನ ಚ್ಯಾರಿಟೇಬಲ್ ಟ್ರಸ್ಟ್ ಸುರತ್ಕಲ್ ಇದರ ನಿರ್ದೇಶಕ ಭಾರವಿ ದೇರಾಜೆ, ಪುತ್ತೂರಿನ ಹಿರಿಯ ಕಲಾವಿದ ಮಾರುತಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ. ಬಿ ಕಲಾವಿದರನ್ನು ಪರಿಚಯಿಸಿ, ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ವಿದ್ಯಾ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ