ಏ.29: ಅಮೃತ ಪ್ರಕಾಶ ವತಿಯಿಂದ 40ನೇ ಸರಣಿ ಪುಸ್ತಕ ಬಿಡುಗಡೆ

Upayuktha
0


ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಅವರ ಸಾರಥ್ಯದ ಸಾಹಿತಿ ಪರ ಅಮೃತ ಪ್ರಕಾಶನ ಪತ್ರಿಕೆ ವತಿಯಿಂದ ನಡೆಯುವ ಸರಣಿ 40ನೇ ಕೃತಿ ಬಿಡುಗಡೆ, ವೀಣಾ ರಾವ್ ವಿಟ್ಲ ಕಥಾ ಸಂಕಲನ "ತಿರುವು" ಲೋಕಾರ್ಪಣೆಯು ಮಂಗಳೂರು ಪತ್ರಿಕಾ ಭವನದಲ್ಲಿ ಏಪ್ರಿಲ್ 29 ರಂದು 10.30ಕ್ಕೆ ನಡೆಯಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಜಿಲ್ಲಾಧ್ಯಕ್ಷರು ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆಯನ್ನು ವಹಿಸುವರು.


ತಿರುವು ಕಥಾ ಸಂಕಲನವನ್ನು ನಿವೃತ್ತ ಶಿಕ್ಷಕರು, ಸಾಹಿತಿ, ವಿಮರ್ಶಕರಾದ ಕೆ.ರವೀಂದ್ರ ರೈ ಕೃತಿ ಬಿಡುಗಡೆಗೊಳಿಸುವರು. ಮುಖ್ಯ ಅತಿಥಿಗಳಾಗಿ ಅಗರಿ ಎಂಟರ್ ಪ್ರೈಸಸ್ ಸುರತ್ಕಲ್ ಮುಖ್ಯಸ್ಥರಾದ ಅಗರಿ ರಾಘವೇಂದ್ರ ರಾವ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು  ಡಾ.ಅರುಣಾ ನಾಗರಾಜ್, ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ ಮಾಲತಿ ಶೆಟ್ಟಿ ಮಾಣೂರು, ಲೇಖಕಿ ವೀಣಾ ರಾವ್, ಕವಿಯತ್ರಿ, ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top