ವಿವಿಧೆಡೆಗಳಿಂದ ಹರಿದುಬಂತು ಹಸಿರುವಾಣಿ
ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಭಾನುವಾರ ಆರಂಭವಾಗಿದ್ದು ಮಾಡತ್ತಡ್ಕ ಶ್ರೀ ಹರಿಹರ ಭಜನಾ ಮಂದಿರದಿಂದ ಬೆಳಗ್ಗೆ ಹಸಿರುವಾಣಿ ಮೆರವಣಿಗೆ ಜರಗಿತು. ಭಜನಾ ಮಂದಿರದ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು. ದೇವರಮೆಟ್ಟು, ಕುಂಟಿಕಾನ ದಾರಿಯಾಗಿ ಶ್ರೀಕ್ಷೇತ್ರಕ್ಕೆ ತಲುಪಿದ ಮೆರವಣಿಗೆಯನ್ನು ಬ್ರಹ್ಮಕಲಶೋತ್ಸವದ ಪದಾಧಿಕಾರಿಗಳು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಬಿ.ವಸಂತಪೈ ಬದಿಯಡ್ಕ ಕಲ್ಲಂಗಡಿ ಹಣ್ಣು ವಿತರಿಸಿದರು. ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ಟ ಕೆ.ಎಂ. ಪ್ರಾರ್ಥನೆಯನ್ನು ಸಲ್ಲಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಆಳ್ವ ಕಳತ್ತೂರು, ಉಪಾಧ್ಯಕ್ಷ ಮಹಾಲಿಂಗೇಶ್ವರ ಭಟ್ ಪೆರ್ಣೆ, ಪ್ರಧಾನ ಕಾರ್ಯದರ್ಶಿ ಶ್ಯಾಮ ಭಟ್ ಕೆ.ಎಂ., ಫಿಟ್ ಪರ್ಸನ್ ಹಾಗೂ ಕೋಶಾಧಿಕಾರಿ ರಮಾನಾಥ ಶೆಟ್ಟಿ, ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ವಿ.ಬಿ.ಕುಳಮರ್ವ, ಸಮಿತಿಯ ಪದಾಧಿಕಾರಿಗಳು, ಭಗವದ್ಭಕ್ತರು ಈ ಸಂದರ್ಭದಲ್ಲಿ ಜೊತೆಗಿದ್ದರು. ಇದೇ ಸಂದರ್ಭದಲ್ಲಿ ಉಗ್ರಾಣಮುಹೂರ್ತ ನೆರವೇರಿಸಲಾಯಿತು.
ಇಂದು ನಡೆಯುವ ಕಾರ್ಯಕ್ರಮಗಳು :
ಪ್ರಾತಃಕಾಲ ಗಣಪತಿ ಹೋಮ, ವಿವಿಧ ತಾಂತ್ರಿಕ ಕಾರ್ಯಕ್ರಮಗಳು, ಮಧ್ಯಾಹ್ನ ಪ್ರಸಾದ ಭೋಜನ, ಸಂಜೆ ಹೋಮ ಕಲಶಾಭಿಷೇಕ, ಅಂಕುರಪೂಜೆ, ಮಹಾಪೂಜೆ ನಡೆಯಲಿದೆ. ಬೆಳಗ್ಗಿನಿಂದ ಸಂಜೆ ತನಕ ವಿವಿಧ ಭಜನಾ ಸಂಘಗಳಿಂದ ಭಜನೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ 10ಗಂಟೆಗೆ ವಿದುಷಿ ಸರಸ್ವತಿ ಕೃಷ್ಣನ್ ಮತ್ತು ಬಳಗ ಸಾರಂಗ ಸಂಗೀತ ಶಾಲೆ ಕುಮಾರಮಂಗಲ ಬೇಳ ಇವರಿಂದ ಸಂಗೀತ ಕಚೇರಿ, ಅಪರಾಹ್ನ 2ರಿಂದ ಪರಮೇಶ್ವರ ಆಚಾರ್ಯ ಕಲಾಸೇವಾ ಪ್ರತಿಷ್ಠಾನ ನೀರ್ಚಾಲು ಇವರಿಂದ ಯಕ್ಷಗಾನ ತಾಳಮದ್ದಳೆ ವಾಮನ ಚರಿತ್ರೆ, ಸಂಜೆ 7ರಿಂದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯಾರ್ಪಣಂ ಪ್ರದರ್ಶನಗೊಳ್ಳಲಿದೆ.
ಏಪ್ರಿಲ್ ೨೩ (ನಾಳೆ) ಕಾರ್ಯಕ್ರಮಗಳು :
ಪ್ರಾತಃಕಾಲ ಗಣಪತಿಹೋಮ, ವಿವಿಧ ತಾಂತ್ರಿಕ ಕಾರ್ಯಕ್ರಮಗಳು, ಭಜನಾಸಂಘಗಳಿಂದ ಭಜನೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ 10 ಗಂಟೆಯಿಂದ ಕೀರ್ತನ ಕುಟೀರ ಕುಂಬಳೆ ಇವರಿಂದ ಹರಿಕಥೆ, 11.30 ಶಿಲ್ಪಾಪರಮೇಶ್ವರಿ, ಕು ಚಿನ್ಮಯಿ ಹಾಗೂ ಚಿರಾಗ್ ಕೃಷ್ಣ ವಾಶೆಮನೆ ಇವರಿಂದ ಸಂಗೀತ ಕಾರ್ಯಕ್ರಮ, ಅಪರಾಹ್ನ ೨ರಿಂದ ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾಸಂಘ ಬಾಯಾರುಪದವು ಇವರಿಂದ ಯಕ್ಷಗಾನ ತಾಳಮದ್ದಳೆ ದಕ್ಷಾಧ್ವರ, ಸಂಜೆ 7ರಿಂದ ರಂಗಸಿರಿ ಸಾಂಸ್ಕೃತಿಕ ವೇದಿಕೆ ಬದಿಯಡ್ಕ ಇವರಿಂದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಉಗ್ರಾಣ ಮುಹೂರ್ತ
ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂದರ್ಭ ಉದ್ಯಮಿ ಗೋಪಾಲಕೃಷ್ಣ ಪೈ ಬದಿಯಡ್ಕ ಅವರು ದೀಪಬೆಳಗಿಸಿ ಉಗ್ರಾಣಮುಹೂರ್ತ ನೆರವೇರಿಸಿದರು. ಅವರ ವತಿಯಿಂದ ಅನ್ನದಾನಕ್ಕೆ ಹಸಿರುವಾಣಿಯನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಸಮಿತಿಗಳ ಸಂಚಾಲಕರು, ಭಗವದ್ಭಕ್ತರು ಉಪಸ್ಥಿತರಿದ್ದರು.
..................
ಮಾತೃಸಮಿತಿಯಿಂದ ಪೂಜಾ ಸಾಮಾಗ್ರಿಗಳ ಸಮರ್ಪಣೆ
ಕುಂಟಿಕಾನ ಮಠದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾತೃಸಮಿತಿಯ ವತಿಯಿಂದ ಶ್ರೀದೇವರಿಗೆ ಪೂಜಾಸಮಾಗ್ರಿ, ಗಂಟೆಯನ್ನು ಸಮರ್ಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
