ಗುರು ಪರಂಪರೆ ಅತ್ಯಂತ ಶ್ರೇಷ್ಠ ಪರಂಪರೆ: ಡಾ. ಶ್ರೀಧರ ಹೆಚ್.ಜಿ

Upayuktha
0


ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಗುರು ಪರಂಪರೆ ಎನ್ನುವುದು ಅತ್ಯಂತ ಶ್ರೇಷ್ಠವಾದ ಪರಂಪರೆ. ರಾಮಾಯಣ, ಮಹಾಭಾರತ, ವೈದಿಕ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರವಾದ ಸ್ಥಾನವಿದೆ. ಜ್ಞಾನದ ದಾರಿಯಲ್ಲಿ ಪ್ರವೇಶ ಮಾಡಲು ಮೊದಲು ಮನಸ್ಸನ್ನು ನಿಗ್ರಹಿಸಬೇಕು. ನಮ್ಮ ಜ್ಞಾನದ ಹಾದಿಯನ್ನು ನಾವೇ ಹುಡುಕಿ ಅದರಲ್ಲಿ ಮುನ್ನುಗ್ಗಬೇಕು. ಜೀವನದಲ್ಲಿ ಅಧ್ಯಯನವಿಲ್ಲದೆ ಯಾವುದು ಪರಿಪೂರ್ಣವಾಗುವುದಿಲ್ಲ. ಅಧ್ಯಯನ ಮಾಡಲು ಆಸಕ್ತಿ ಮುಖ್ಯ ಎಂದು ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ. ಶ್ರೀಧರ್ ಹೆಚ್.ಜಿ ಹೇಳಿದರು.


ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗ ಸಂಸ್ಥೆಯಾದ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಐಕ್ಯೂಎಸಿ ಮತ್ತು ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜು ಇವುಗಳ ಸಹಯೋಗದಲ್ಲಿ ಭವಿಷ್, ಯಶಸ್, ವಿಕಾಸ ಮತ್ತು ನ್ಯಾಯಾಧಾರ ಘಟಕಗಳ ವಿಶೇಷ ಶಿಬಿರ ಪ್ರೇರಣಾ 2024 ಉದ್ಧಾಟಿಸಿ ಮಾತನಾಡಿದರು.


ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಅಧ್ಯಕ್ಷ್ಯೀಯ ಮಾತುಗಳನ್ನಾಡಿ, ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಕರು ಮಹತ್ತರ ಪಾತ್ರವನ್ನು ವಹಿಸುತ್ತಾರೆ. ಹಿಂದಿನ ಪರಂಪರೆಯಲ್ಲಿ ಗುರುಗಳನ್ನು ಆಚಾರ್ಯ ಎಂದು ನಮೂದಿಸಿದ್ದಾರೆ. ವೈಯಕ್ತಿಕ ಹಿತಾಸಕ್ತಿಯ ಜೊತೆಗೆ ಸಾರ್ವಜನಿಕ ಹಿತಾಸಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಸಾರ್ವಜನಿಕ ಬದುಕಿಗೆ ಒಗ್ಗಿಕೊಳ್ಳಲು ಪಠ್ಯಗಳನ್ನು ಹೊರತಾಗಿ ಉಳಿದ ಮೌಲ್ಯಗಳನ್ನು ತಮ್ಮಲ್ಲಿ ರೂಡಿಸಿಕೊಳ್ಳಬೇಕು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗೆ ಶಿಕ್ಷಣ ನೀಡುವುದೇ ಶಿಕ್ಷಕನ ಮೂಲ ಉದ್ದೇಶವಾಗಬೇಕು ಎಂದು ಹೇಳಿದರು.


ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ,ನ್ಯಾಯವಾದಿ ಮುರಳೀಕೃಷ್ಣ ಕೆ.ಎನ್ ಭಾಗವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಡಾ. ಶ್ರೀಧರ್ ಹೆಚ್.ಜಿ ಅವರಿಗೆ ಗುರುವಂದನಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಪ್ರಥಮ ಬಿ.ಕಾಂ ವಿದ್ಯಾರ್ಥಿ ಧನುಷ್ ಸ್ವಾಗತಿಸಿ, ವಿದ್ಯಾರ್ಥಿನಿ ಅಪೂರ್ವ ವಂದಿಸಿ, ದ್ವಿತೀಯ ಬಿ.ಎ ವಿಭಾಗದ ವಿದ್ಯಾರ್ಥಿನಿ ಮೋಕ್ಷ ನಿರ್ವಹಿಸಿದರು. ಭವಿಷ್ ಘಟಕದ ಸಂಯೋಜಕ, ಡಾ.ಪ್ರಮೋದ್ ಹಾಗೂ ಉಪನ್ಯಾಸಕಿ ಕವಿತಾ ಇವರು ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top