ದ್ವಿತೀಯ ಪಿಯು ಫಲಿತಾಂಶ: ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Upayuktha
0


 ಕಲಾ ವಿಭಾಗದ ಪುರೋಹಿತ್ ಖುಷಿಬೆನ್ ರಾಜ್ಯಕ್ಕೆ 3ನೇ ಸ್ಥಾನ

 482 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ

 331 ವಿದ್ಯಾರ್ಥಿಗಳಿಗೆ ಪ್ರಥಮ ಶ್ರೇಣಿ

 ಕಾಲೇಜಿಗೆ 98.33% ಫಲಿತಾಂಶ 



ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್‌ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ.


ಕಲಾ ವಿಭಾಗದಲ್ಲಿ ಪುರೋಹಿತ ಖುಷಿಬೆನ್ ರಾಜೇಂದ್ರಕುಮಾರ್ (ಉಪ್ಪಿನಂಗಡಿಯ ರಾಜೇಂದ್ರಕುಮಾರ್ ಹಾಗೂ ಮನೀಷಾಬೆನ್ ಇವರ ಪುತ್ರಿ) ಇವರು 594 ಅಂಕಗಳನ್ನು ಗಳಿಸಿಕೊಳ್ಳುವುದರ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ ಹಾಗೂ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಗಳಿಸಿರುತ್ತಾರೆ.


ವಿಜ್ಞಾನ ವಿಭಾಗದಲ್ಲಿ ನೇತ್ರಾ ಡಿ. (ಬಂಟ್ವಾಳದ ಅರುಣ್‌ಕುಮಾರ್ ಹಾಗೂ ವಿಜಯಾ ಡಿ. ಇವರ ಪುತ್ರಿ) 592 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 6ನೇ ರ‍್ಯಾಂಕ್ ಗಳಿಸಿರುತ್ತಾರೆ.  ವಾಣಿಜ್ಯ ವಿಭಾಗದ ವರ್ಷಾ ಪ್ರಕಾಶ್ (ತುಮಕೂರಿನ ಕೆ.ಎಸ್.ಪ್ರಕಾಶ್ ಹಾಗೂ ಟಿ.ಎಲ್. ನಳಿನಾ ಇವರ ಪುತ್ರಿ) ಇವರು 588 ಅಂಕಗಳನ್ನು ಗಳಿಸಿರುತ್ತಾರೆ.


ವಿಜ್ಞಾನ ವಿಭಾಗದಲ್ಲಿ ಗಮನ ಗೌರಿ ಎಸ್.ಎಮ್. (ಬೆಳ್ತಂಗಡಿಯ ಮಹೇಶ್ ಎಸ್ ಹಾಗೂ ದೀಪಾ ಇವರ ಪುತ್ರಿ) 591 ಅಂಕಗಳನ್ನು ಗಳಿಸಿರುತ್ತಾರೆ ಹಾಗೂ ತನುಷ್ (ಪುತ್ತೂರಿನ ಹರೀಶ್ ನಾಯ್ಕ್‌ ಹಾಗೂ ಅನಿತಾ ಇವರು ಪುತ್ರ), ನಿಶ್ಚಯ್ ರೈ (ಕಡಬದ ಉಮೇಶ್ ರೈ ಹಾಗೂ ಸುನೀತಾ ರೈ ಇವರ ಪುತ್ರ) 590 ಅಂಕಗಳನ್ನು ಗಳಿಸಿರುತ್ತಾರೆ.


ಕಲಾ ವಿಭಾಗದಲ್ಲಿ ಅನಿಕಾ ರಶ್ಮಿ ಕೃಷ್ಣ (ಪುತ್ತೂರಿನ ಅರುಣ್ ಕೃಷ್ಣ ಹಾಗೂ ರುಚಿತಾ ಕೃಷ್ಣ ಇವರ ಪುತ್ರಿ) 588 ಅಂಕಗಳನ್ನು ಗಳಿಸಿರುತ್ತಾರೆ ಹಾಗೂ ವೈಷ್ಣವಿ (ಬಂಟ್ವಾಳದ ರಮೇಶ್ ಚಂದ್ರ ಎನ್. ಎಸ್ ಹಾಗೂ ಪಿ.ಪ್ರೇಮಲತಾ ಇವರ ಪುತ್ರಿ) , 587 ಅಂಕಗಳನ್ನು ಗಳಿಸಿರುತ್ತಾರೆ.


ವಾಣಿಜ್ಯ ವಿಭಾಗದಲ್ಲಿ ಮಹೇಂದ್ರ ಗೋಪಾಲ್ ವಿಭಾಸ್ ಕೆ. (ಪುತ್ತೂರಿನ ಪ್ರಸಾದ್ ಕೆ.ವಿ.ಎಲ್.ಎನ್ ಹಾಗೂ ಅನುಪಮಾ ಎಸ್. ಇವರ ಪುತ್ರ), ಕೆ.ಪ್ರಜ್ಞೇಶ್ ಆಚಾರ್ಯ ( ಬಂಟ್ವಾಳದ ಕೆ.ರಮೇಶ್ ಆಚಾರ್ಯ ಹಾಗೂ ಆಶಾ ಆಚಾರ್ಯ ಇವರ ಪುತ್ರಿ) ರಿತೀಕ್ಷಾ ಬಿ. (ಪೆರ್ಲದ ಸುಬ್ಬಣ್ಣ ಪೂಜಾರಿ ಹಾಗೂ ರುಕ್ಮಿಣಿ ಇವರ ಪುತ್ರಿ), ರಕ್ಷಾ ಎಮ್. (ಬಂಟ್ವಾಳದ ಮೋಹನ್ ನಾಯಕ್ ಹಾಗೂ ಜಯಲಕ್ಷಿö್ಮ ಇವರ ಪುತ್ರಿ ) 587 ಅಂಕಗಳನ್ನು ಗಳಿಸಿರುತ್ತಾರೆ. ನಿಶ್ಮಿತಾ (ಬಂಟ್ವಾಳದ ಮಂಜಪ್ಪ ಮೂಲ್ಯ ಮತ್ತು ಉಮಾವತಿ ಇವರ ಪುತ್ರಿ) 586 ಅಂಕಗಳನ್ನು ಗಳಿಸಿರುತ್ತಾರೆ.


ವಿಜ್ಞಾನ ವಿಭಾಗದಲ್ಲಿ 327 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 218 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ವಾಣಿಜ್ಯ ವಿಭಾಗದಲ್ಲಿ 130 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 62 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ಕಲಾ ವಿಭಾಗದಲ್ಲಿ 25 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಒಟ್ಟು 482 ಉನ್ನತ ಶ್ರೇಣಿ ಲಭಿಸಿರುತ್ತದೆ.


ವಿಜ್ಞಾನ ವಿಭಾಗದಲ್ಲಿ 560 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 550 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 98.21% ಫಲಿತಾಂಶ ದಾಖಲಾಗಿರುತ್ತದೆ. ವಾಣಿಜ್ಯ ವಿಭಾಗದಲ್ಲಿ 241 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 237 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 98.34% ಫಲಿತಾಂಶ ದಾಖಲಾಗಿರುತ್ತದೆ. ಕಲಾ ವಿಭಾಗದಲ್ಲಿ 38 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 100% ಫಲಿತಾಂಶ ದಾಖಲಾಗಿರುತ್ತದೆ.


ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top