ಗೋವಿಂದ ದಾಸ ಕಾಲೇಜಿನಲ್ಲಿ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮ

Upayuktha
0



ಸುರತ್ಕಲ್:  ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ ನಡೆಸುತ್ತಿರುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ, ದ್ವಿತೀಯ ಬಿ.ಎ ವಿದ್ಯಾರ್ಥಿನಿ ಸ್ಮಿತಾ ಸಿ ಯವರು ಸದಾನಂದ ಕೆ. ಉಚ್ಚಿಲ ರವರು ಬರೆದ ಮೊಗವೀರ ಸಮುದಾಯ – ಒಂದು ಅದ್ಯಯನ ಎಂಬ ಪುಸ್ತಕವನ್ನು ಪರಿಚಯಿಸಿದರು. ಈ ಕೃತಿಯಲ್ಲಿ ಮೊಗವೀರ ಸಮಾಜದ ಸಾಮಾಜಿಕ, ರಾಜಕೀಯ. ಆರ್ಥಿಕ, ಧಾರ್ಮಿಕ ಆಚರಣೆಗಳು ಸುಂದರವಾಗಿ ಮೂಡಿಬಂದಿವೆ  ಎಂದರು. 


ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿಯವರು , ಸ್ಮಿತಾ ಸಿ ಯವರಿಗೆೆ ಸ್ಮರಣಿಕೆ ನೀಡಿ ಗೌರವಿಸಿದರು. ಪ್ರಾದ್ಯಾಪಕರುಗಳಾದ  ಡಾ. ಸುಧಾ.ಯು ಶೆಟ್ಟಿ, ಡಾ. ವಿಜಯಲಕ್ಷ್ಮೀ, ಅಕ್ಷತಾ ವಿ.ಶೆಟ್ಟಿ,  ಗ್ರಂಥಪಾಲಕಿ ಡಾ.ಸುಜಾತಾ ಬಿ, ಗ್ರಂಥಾಲಯದ ಸಿಬ್ಬಂದಿಗಳು  ಉಪಸ್ಥಿತರಿದ್ದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿ ಧನುಶ್ರೀ ಸ್ವಾಗತಿಸಿ ವಂದಿಸಿದರು.          



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top