ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಸೋಮವಾರದಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾದ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ. ಅವರು ಅಂಬೇಡ್ಕರ್ರವರ ಬದುಕು, ಚಿಂತನಾ ಕ್ರಮ, ಅವರ ಸಾಧನೆಗಳ ಕುರಿತು ಮಾತನಾಡಿದರು. ವಿವಿಧ ವಿಷಯಗಳ ಅಧ್ಯಯನ ನಡೆಸುವುದರೊಂದಿಗೆ ಅನೇಕ ಮಹ್ವತದ ಕೃತಿಗಳನ್ನು ನೀಡಿರುವರು. ಸಂವಿಧಾನ ರೂಪಿಸುವಲ್ಲಿ ಅವರು ತೋರಿದ ಶ್ರದ್ಧೆ, ಮಾನವ ಪ್ರೀತಿ, ಜಗತ್ತಿನ ಸಂವಿಧಾನಗಳ ಅಧ್ಯಯನವನ್ನು ಮಾಡಿ ಆ ಮೂಲಕ ಭಾರತದ ಸಂವಿಧಾನವನ್ನು ಜಗತ್ತಿನ ಶ್ರೇಷ್ಠ ಸಂವಿಧಾನವನ್ನಾಗಿ ರೂಪಿಸಲು ಅಪಾರ ಪರಿಶ್ರಮಪಟ್ಟ ಬಗೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ರೈ ಕೆ. ಅವರು ಪ್ತಾಸ್ತಾವಿಕ ನುಡಿಯೊಂದಿಗೆ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿರಿಗಳಾದ ಡಾ. ರಾಘವ ನಾಯ್ಕ ಹಾಗೂ ಕಾಲೇಜಿನ ಗ್ರಂಥಪಾಲಕರಾದ ಶ್ರೀ ಕೃಷ್ಣ ಸಾಸ್ತಾನ ಉಪಸ್ಥಿತರಿದ್ದರು.
ಇತಿಹಾಸ ವಿಭಾಗದ ವಿದ್ಯಾರ್ಥಿನಿ ಕು. ನಿಶಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ