ಸಾಹಿತ್ಯಕ ಕುತೂಹಲ ಉತ್ತಮ ಮಾತುಗಾರಿಕೆಗೆ ಸಹಕಾರಿ: ಡಾ. ಬಿ.ಎ. ಕುಮಾರ ಹೆಗ್ಡೆ

Upayuktha
0

ರತ್ನವರ್ಮ ಹೆಗ್ಗಡೆ ಸ್ಮಾರಕ ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಚರ್ಚಾ ಸ್ಪರ್ಧೆ



ಉಜಿರೆ: ಸಾಹಿತ್ಯಕ ಕುತೂಹಲ ಉತ್ತಮ ಮಾತುಗಾರಿಕೆಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಹೆಚ್ಚಿನ ಓದಿನ ಮೂಲಕ ತಮ್ಮ ಭಾಷಣ ಕಲೆಯನ್ನು ಮೊನಚುಗೊಳಿಸಿಕೊಳ್ಳಬೇಕು ಎಂದು ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ. ಕುಮಾರ ಹೆಗ್ಡೆ ಆಶಿಸಿದರು.

      

ಉಜಿರೆಯ ಎಸ್‌ಡಿಎಂ ಕಾಲೇಜಿನ ಸಮ್ಯಕ್ ದರ್ಶನ ಸಭಾಂಗಣದಲ್ಲಿ  ಶನಿವಾರ ಆಯೋಜಿಸಿದ್ದ 40ನೇ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ 'ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ' ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

     

ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ದೊರಕುವ ಓದಿನ ಮೂಲಗಳಿಗೆ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದಾರೆ. ಬದಲಾಗಿ ಹೆಚ್ಚಿನ ಪುಸ್ತಕಗಳನ್ನು ಓದಬೇಕು. ಓದಿನ ತುಡಿತ ಮನುಷ್ಯನನ್ನು ಮಹತ್ತರ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಶ್ರೇಷ್ಠ ವಾಗ್ಮಿಗಳ ಕೃತಿಗಳು ವಿದ್ಯಾರ್ಥಿಗಳ ಭಾಷಣ ಕಲೆಯಲ್ಲಿ ಸಹಕಾರಿಯಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

     

ನಿರ್ಣಾಯಕರಾದ ಡಾ. ಡಿ ಕೃಷ್ಣಮೂರ್ತಿ ಮಾತನಾಡಿದರು. ಆಲೋಚನಾ ಶಕ್ತಿ ಭಾಷಣ ಕಲೆಗಳಿಗೆ ಸಹಾಯಕವಾಗಿದೆ. ವಿಷಯಗಳ ಅವಲೋಕನ ವಿಸ್ತಾರ ಮಂಡನೆಗೆ ಉಪಯುಕ್ತವಾಗಿದೆ.ಭಾಷಣ ಕಲೆಯು ವಿಚಾರಧಾರೆಯ ಸಮರ ಇಲ್ಲಿ ಭಾಷಣಗಾರ ತನ್ನ ಜ್ಞಾನ ಹಾಗೂ ಹಾವಭಾವಗಳಿಂದ ಕೇಳುಗರನ್ನು ಆಕರ್ಷಿಸಬೇಕು ಎಂದರು.

      

ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ಚೇತನಾ ಪೈ ಹಾಗೂ ಅನುಷಾ ಚರ್ಚಾಸ್ಪರ್ಧೆಯಲ್ಲಿ ಪ್ರಥಮ ಬಹುಮಾನಿತರಾಗಿ ಹೊರಹೊಮ್ಮಿದರು. ದ್ವಿತೀಯ ಸ್ಥಾನವನ್ನು ಕಾರ್ಕಳದ ಭುವನೇಂದ್ರ ಕಾಲೇಜಿನ ವಿಧ್ಯಾರ್ಥಿಗಳು ಪಡೆದುಕೊಂಡರು. ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ಹಿತ ಉಮೇಶ್ ಉತ್ತಮ ಚರ್ಚಾಪಟು ಪ್ರಶಸ್ತಿ ಗಳಿಸಿದರು. ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಮಟ್ಟದ ಕಾಲೇಜುಗಳ 20ಕ್ಕೂ ಅಧಿಕ ತಂಡಗಳು ಭಾಗವಹಿಸಿದ್ದವು.


ಕಾರ್ಯಕ್ರಮದಲ್ಲಿ ಸಂಯೋಜಕ ಡಾ. ಸುಧೀರ್  ಕೆ.ವಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನಾಗಣ್ಣ ಡಿ ಎ ಸ್ವಾಗತಿಸಿದರು. ಪ್ರಾಧ್ಯಾಪಕ ಮಹೇಶ್ ಆರ್ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top