VCET: ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

Upayuktha
0



ಪುತ್ತೂರು: ತಂತ್ರಜ್ಞಾನವು ಅಪರಿಮಿತ ವೇಗದಲ್ಲಿ ಬದಲಾವಣೆಯಾಗುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ಅಗಾಧವಾದ ಬದಲಾವಣೆಗಳಾಗುತ್ತಿದೆ. ಹೊಸ ಪಠ್ಯಕ್ರಮದ ಮೂಲಕ ನೂತನ ತಂತ್ರಜ್ಞಾನಗಳು ನಮ್ಮನ್ನು ತಲಪುವುದಕ್ಕೆ ಸಮಯಾವಕಾಶ ಬೇಕಾಗುತ್ತದೆ ಇದನ್ನು ತಪ್ಪಿಸುವುದಕ್ಕಾಗಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮಗಳನ್ನು ಮಾಡುವುದು ಆವಶ್ಯಕ ಎಂದು ಬೆಂಗಳೂರಿನ ಮೇದಿನಿ ಟೆಕ್ನಾಲಜೀಸ್ ಸಂಸ್ಥೆಯ ಡಿಸೈನ್ ಇಂಜಿನಿಯರ್ ಮೋಹನ್ ಪ್ರಭು ಹೇಳಿದರು.


ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಬೆಂಗಳೂರಿನ ಮೇದಿನೀ ಟೆಕ್ನಾಲಜೀಸ್, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ 5 ದಿನಗಳ ಬಿಲ್ಡಿಂಗ್ ಇನ್ಫಾರ್ಮೇಶನ್ ಮಾಡೆಲಿಂಗ್ ಇನ್ ಸಿವಿಲ್ ಇಂಜಿನಿಯರಿಂಗ್-ಎಂಪವರಿಂಗ್ ಎಜುಕೇಟರ್ಸ್ ವಿಷಯದ ಬಗ್ಗೆ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮೂಲ ಇಂಜಿನಿಯರಿಂಗ್ ವಿಭಾಗಗಳಿಗೆ ಯಾವತ್ತೂ ಅಳಿವಿಲ್ಲ ಇತರ ವಿಭಾಗಗಳ ಏರುಗತಿಯ ಬೆಳವಣಿಗೆಯಿಂದಾಗಿ ಕೊಂಚ ಸೊರಗಿದಂತೆ ಅನಿಸುತ್ತದೆ ಎಂದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಇಂಜಿನಿಯರಿಂಗ್ ವಿಭಾಗದ ಪ್ರತಿಯೊಂದು ವಿಷಯಗಳೂ ಸಮಾನ ಅವಕಾಶಗಳನ್ನು ಹೊಂದಿದೆ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳ್ನು ಹೇಳುವ ಮೊದಲು ಬೋಧಕರು ಅದರ ಬಗ್ಗೆ ತಿಳುವಳಿಕೆ ಹೊಂದುವುದು ಆವಶ್ಯಕ ಎಂದರು. ವಿದ್ಯಾರ್ಥಿಗಳ ಹಾಗೂ ಬೋಧಕರ ಅಭಿವೃದ್ಧಿಗೆ ಕಾಲೇಜು ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುತ್ತದೆ. ಇದರಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ನುಡಿದರು.


ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ, ಕಾರ್ಯಕ್ರಮ ಸಂಯೋಜಕ ಡಾ.ಆನಂದ್.ವಿ.ಆರ್ ಮತ್ತು ಸಹ ಸಂಯೋಜಕಿ ಪ್ರೊ.ಸುರೇಖಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರೊ.ಪ್ರಶಾಂತ ಸ್ವಾಗತಿಸಿ, ಪ್ರೊ.ಸುರೇಖಾ.ಟಿ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರ್ವಹಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top