ಓಂಕಾರ ಆಶ್ರಮದಲ್ಲಿ 365 ದಿನಗಳ ನಿರಂತರ ಭಜನೋತ್ಸವ ಸಂಪನ್ನ

Upayuktha
0

ಬೆಂಗಳೂರು: ಕೆಂಗೇರಿ- ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿರುವ ಶ್ರೀನಿವಾಸಪುರದ ಓಂಕಾರ ಆಶ್ರಮದಲ್ಲಿ (ಜೆಎಸ್ಎಸ್ ಇಂಜಿನಿಯರಿಂಗ್ ಕಾಲೇಜು ಹಿಂಭಾಗ) ನಿರಂತರ ಭಜನೋತ್ಸವದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು.


ಓಂಕಾರಾಶ್ರಮದ ಪೂಜ್ಯ ಶ್ರೀ ಮಧುಸೂದನಂದಪುರಿ ಸ್ವಾಮಿಗಳು, ಕೆ.ಆರ್ ಪುರಂ ರಾಮಕೃಷ್ಣ ವಿವೇಕಾನಂದ ಸಾಧನ ಕೇಂದ್ರದ ಚಂದ್ರೇಶಾನಂದ ಜಿ ರವರ ದಿವ್ಯ ಸಾನಿಧ್ಯದಲ್ಲಿ, ಕರ್ನಾಟಕ ದಕ್ಷಿಣ ಪ್ರಾಂತ ಸಂಘ ಚಾಲಕರಾದ ಜಿ.ಎಸ್ ಉಮಾಪತಿ ದಿಕ್ಸೂಚಿ ಭಾಷಣ ಮಾಡಿದರು.


ಆಯೋಜಕರಾದ ಅಧ್ಯಕ್ಷ ಡಾ.ಕೆ ವಿ ಮುರಳೀಧರ ಶರ್ಮ ಪ್ರಾಸ್ತಾವಿಕ ಮಾತುಗಳನ್ನು ಆಡುತ್ತ, ಸತ್ಸಂಗ ಭಜನಾ ಮಹಾ ಮಂಡಳಿ ಸಭಾ ರಾಷ್ಟ್ರಮಟ್ಟದಲ್ಲಿ ಭಜನಾಮೇಳ ಆಯೋಜಿಸುವಲ್ಲಿ ಒಂದು ದಿಟ್ಟ ಹೆಜ್ಜೆ ಇಟ್ಟು 365 ದಿನಗಳ ನಿರಂತರ ಭಜನೋತ್ಸವವನ್ನು ಆರಂಭಿಸಿದ್ದು, ಇದು ಇಂದಿಗೆ ಸಂಪನ್ನಗೊಳ್ಳುತ್ತಿದೆ. ನಶಿಸಿ ಹೋಗುತ್ತಿರುವ ಭಜನಾ ಪದ್ಧತಿಯ ಪುನರುತ್ಥಾನಕ್ಕಾಗಿ, ವಿಶ್ವಶಾಂತಿಗಾಗಿ ವಿಶ್ವಕ್ಕೆ ಜ್ಞಾನದ ಬೆಳಕನ್ನು ಹರಡಿದ ಹಿಂದೂ ಧರ್ಮದ ಸಂಘಟನೆಯ ನಿಟ್ಟಿನಲ್ಲಿ ಇದನ್ನು ಆಯೋಜಿಸಲಾಗಿತ್ತು. ಬೆಂಗಳೂರು ಮಹಾನಗರದ ಹಲವಾರು ಭಜನಾ ಮಂಡಳಿಗಳನ್ನು ಒಂದೇ ವೇದಿಕೆಯಲ್ಲಿ ತರುವ ಉದ್ದೇಶದಿಂದ 2019-20 ರಲ್ಲಿ 365 ದಿನಗಳ ನಿರಂತರ ಭಜನಾ ಉತ್ಸವವನ್ನು ಏರ್ಪಡಿಸಲಾಗಿತ್ತು. ಅದರ ಸಮಾರೋಪ ಸಮಾರಂಭ ಇದಾಗಿದ್ದು ಮುಂದಿನ ದಿನಗಳಲ್ಲಿ ನಗರದ ನಾನಾ ಭಾಗಗಳಲ್ಲಿ ನಾನಾ ಭಜನಾ ಮಂಡಳಿಗಳ ಮೂಲಕ ಧರ್ಮ ಜಾಗೃತಿ ಮಾಡಲು ಸಂಕಲ್ಪ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.


ಸಮಾರಂಭದ ವೇದಿಕೆಯಲ್ಲಿ ಅಖಿಲ ಭಾರತ ಬ್ರಾಹ್ಮಿನ್ ಫೆಡರೇಷನ್ ಮಾಲಿನಿ, ಗ್ಲೋಬಲ್ ವಿಷ್ಣು ಸಹಸ್ರನಾಮ ಫೆಡರೇಶನ್ ನಿರ್ದೇಶಕಿ ಮಂಗಳ ಭಾಸ್ಕರ್, ಎ.ಕೆ.ಬಿ.ಎಂ.ಎಸ್ ಉಪಾಧ್ಯಕ್ಷ ಎಂಆರ್ ಶಿವಶಂಕರ್, ಕೊಟ್ಟೂರು ಅಮರನಾಥ ಯಾತ್ರಾ ಸೇವಾ ಸಮಿತಿಯ ಕಾರ್ಯದರ್ಶಿ ಸಾಯಿ ಸತೀಶ್ ಕೋರಗಲ್ ಮತ್ತು ಎಕೆಬಿಪಿಯ ಕಾರ್ಯದರ್ಶಿ ಮಲ್ಲಿಕಾರ್ಜುನ ಟಿ ಎಸ್ ಉಪಸ್ಥಿತರಿದ್ದರು.


ಹಿರಿಯ ಭಜನಾ ಸಂಘಟಕ ಕೀರ್ತಿಶೇಷ ಡಾ ಬ್ರಹ್ಮತೇಜ ವೆಂಕಟರಾಮಯ್ಯ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಸತ್ಸಂಗ ಭಜನಾ ಮಹಾಮಂಡಳಿಯ ವತಿಯಿಂದ ವರ್ಷಾದ್ಯಂತ ನಡೆದ ಭಜನಾ ಉತ್ಸವದಲ್ಲಿ ಪಾಲ್ಗೊಂಡ ಅನೇಕ ಭಜನಾ ಮಂಡಳಿಗಳಿಗೆ ಪ್ರಶಸ್ತಿ ಪತ್ರ ಮತ್ತು ಸ್ಮರಣೆಕೆಯನ್ನು ವಿತರಿಸಲಾಯಿತು. ವಿದ್ವಾನ್ ಖಾಸಿಂ ಮಲ್ಲಿಗೆ ಮಡುವು ನೇತೃತ್ವದ ತಂಡದ ಮಕ್ಕಳಿಂದ ವಿಶೇಷ ಶಿವ ತಾಂಡವ ಸ್ತೋತ್ರದ ಪ್ರಸ್ತುತಿ ನಡೆಯಿತು.


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top