ಮಂಗಳೂರು: ಹಿರಿಯ ಉದ್ಯಮಿ, ಸಮಾಜಸೇವಕ, ಪರಿವಾರದ ಚಟುವಟಿಕೆಗಳಿಗೆ ಸದಾ ಬೆನ್ನೆಲುಬಾಗಿ ನಿಂತ ಸರಳ ಸಜ್ಜನ ವ್ಯಕ್ತಿತ್ವದ ಉಪೇಂದ್ರ ಕಾಮತ್ ರ ನಿಧನಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾವಪೂರ್ಣ ಶ್ರದ್ದಾಂಜಲಿಗಳನ್ನು ಅರ್ಪಿಸಿದ್ದಾರೆ.
ಜನಸಂಘದ ಕಾಲದಿಂದ ಹಿಂದೂ ಸಮಾಜದ ಅಭ್ಯುದಯಕ್ಕಾಗಿ ದುಡಿದು ತುರ್ತುಪರಿಸ್ಥಿತಿ, ರಾಮಜನ್ಮಭೂಮಿ ಹೋರಾಟ ಹೀಗೆ ಹಲವಾರು ಹೋರಾಟದಲ್ಲಿ ಭಾಗವಹಿಸಿದ್ದ ಉಪೇಂದ್ರ ಕಾಮತರು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಉತ್ಸುಕತೆಯಿಂದ ಭಾಗವಹಿಸಿ ನನ್ನನ್ನು ಆಶೀರ್ವದಿಸಿರುವುದನ್ನು ಶ್ರದ್ದೆಯಿಂದ ಸ್ಮರಿಸುತ್ತಾ, ಅವರ ಅಗಲುವಿಕೆಯ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೂ ಮತ್ತು ಅವರ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತಾ ಅಗಲಿದ ಚೇತನಕ್ಕೆ ಸದ್ಗತಿಯನ್ನು ಕೋರುತ್ತೇನೆ ಎಂದು ಕ್ಯಾ. ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ