ಹಾಸನ: ಹಳೆಯ ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಜೆ.ಬಿ. ತಮ್ಮಣ್ಣ ಗೌಡರಿಗೆ ಸನ್ಮಾನ

Upayuktha
0

 


ಹಾಸನ: ತಾಲ್ಲೂಕಿನ ಕಂದಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2008 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಆಶಾ ಪಿ. ಎಲ್., ಪಲ್ಲವಿ ಡಿ.ಕೆ. ಮತ್ತು ಸಂದೀಪ್. ಯು. ಮತ್ತು ಅವರ ತಂಡವು ಇಂದು ವಿವಿಧ ಔದ್ಯೋಗಿಕ ಕ್ಷೇತ್ರಗಳಲ್ಲಿ ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ಸಾಧನೆ ಮಾಡಿ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಸಮಾಜಮುಖಿಯಾಗಿ ಸೇವೆ ಮಾಡುತ್ತಿದ್ದಾರೆ.

ಅವರೆಲ್ಲರೂ ಸೇರಿ, ಆ ಶಾಲೆಯಲ್ಲಿ ಅಂದು ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದು ಮತ್ತು ಪ್ರಸ್ತುತ ಉಪನಿರ್ದೇಶಕರ ಕಛೇರಿಯಲ್ಲಿ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೆ.ಬಿ. ತಮ್ಮಣ್ಣ ಗೌಡರವರನ್ನು ಹಾಸನ ನಗರದ ಅಶೋಕ ಹೋಟೆಲ್ ಗೆ ಆಹ್ವಾನಿಸಿ ಗೌರವಿಸಿ ಹಾರೈಸಿ ಸನ್ಮಾನಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top