ಬೆಂಗಳೂರು: ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 9ರಂದು ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಐಶ್ವರ್ಯ ಶ್ರೀನಿಧಿ ಕುಲಕರ್ಣಿ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತಪಡಿಸಿದರು.
ಇವರ ಗಾಯನಕ್ಕೆ ಕು|| ಸೃಷ್ಟಿ ದೇಸಾಯಿ ಹಾರ್ಮೋನಿಯಂ ವಾದನದಲ್ಲಿ ಹಾಗೂ ಚಿ|| ಋತುಪರ್ಣ ದೇಸಾಯಿ ತಬಲಾ ವಾದನದಲ್ಲಿ ಸಾಥ್ ನೀಡಿದರು. ನಂದಕಿಶೋರ್ ಆಚಾರ್ ಕಲಾವಿದರಿಗೆ ಶೇಷವಸ್ತ್ರ ಮತ್ತು ಪ್ರಸಾದ ವಿತರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ