ಹಸಿರಿದ್ದರೆ ಮಾತ್ರ ಉಸಿರಿದ್ದೀತು: ಮಾಧವ ಉಳ್ಳಾಲ

Upayuktha
0


ಮಂಗಳೂರು: ನಗರೀಕರಣ, ಕೈಗಾರಿಕೀಕರಣ ಮತ್ತು ಅಭಿವೃದ್ಧಿಯ ಕುಂಟು ನೆಪ ಇಟ್ಟುಕೊಂಡು ನಮ್ಮ ಸುತ್ತಲಿನ  ಮರ ಗಿಡಗಳನ್ನು  ನಾಶ ಮಾಡಿ  ಪರಿಸರವನ್ನು ನಾವು ಮನುಷ್ಯರು ಹಾಳುಮಾಡುತ್ತಿದ್ದೇವೆ. ನೈಸರ್ಗಿಕ ಕಾಡನ್ನು ಬರಿದು ಮಾಡಿ,  ಕಾಂಕ್ರೀಟ್ ಕಾಡಿನಲ್ಲಿ ಆಮ್ಲಜನಕ  ಸಿಲಿಂಡರ್ ಮನೆಯಲ್ಲಿಟ್ಟುಕೊಂಡು ಉಸಿರಾಡಲು ಪಡಬಾರದ ಪಾಡು ಮನುಷ್ಯ ಇಂದು  ಅನುಭವಿಸುತ್ತಿದ್ದಾನೆ. ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ  ಮನುಷ್ಯ ಪ್ರತಿಯೊಂದು ಉಸಿರು ತೆಗೆಯಲೂ ಹರ ಸಾಹಸಪಟ್ಟಿದ್ದಾನೆ. ಇನ್ನಾದರೂ  ನಾವು ಎಚ್ಚೆತ್ತುಕೊಂಡು ನಮ್ಮ ಮನೆ ಸುತ್ತಮುತ್ತ ಹಸಿರು ಮರಗಿಡಗಳನ್ನು ಬೆಳೆಸಿ ಶುದ್ಧ ಆಮ್ಲಜನಕಯುಕ್ತ ಗಾಳಿ ಸಿಗುವಂತೆ ಮಾಡಬೇಕು. ಇಲ್ಲವಾದಲ್ಲಿ ಮುಂದೊಂದು ದಿನ ಆಮ್ಲಜನಕ ಸಿಲಿಂಡರ್ ಬೆನ್ನಿಗೆ ಕಟ್ಟಿಕೊಂಡು ಓಡಾಡಬೇಕಾದೀತು ಎಂದು ಖ್ಯಾತ ಪರಿಸರವಾದಿ ಮತ್ತು ದ.ಕ. ಜಿಲ್ಲಾ ರೆಡ್‍ಕ್ರಾಸ್ ಸಂಸ್ಥೆಯ ಸಕ್ರಿಯ ಸದಸ್ಯ ಮಾಧವ ಉಳ್ಳಾಲ ಅಭಿಪ್ರಾಯಪಟ್ಟರು.


ದ.ಕ ಜಿಲ್ಲಾ ಗೃಹರಕ್ಷಕದಳ ಮತ್ತು ದ.ಕ ಜಿಲ್ಲಾ  ಪೌರರಕ್ಷಣಾ ಪಡೆಯ ವತಿಯಿಂದ ನಗರದ ಮೇರಿಹಿಲ್‍ನಲ್ಲಿರುವ ದ.ಕ. ಜಿಲ್ಲಾ ಗೃಹರಕ್ಷಕ ದಳದ  ಕಛೇರಿಯಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ಗುರುವಾರದಂದು ವನಮಹೋತ್ಸವ ಜರುಗಿತು. ನೇರಳೆ, ಕದಂಬ, ಹಲಸು. ಬಾದಾಮಿ ಮುಂತಾದ ನೆರಳು ನೀಡುವ ಮತ್ತು ಹಣ್ಣಿನ ಗಿಡಗಳನ್ನು ಈ ಸಂದರ್ಭದಲ್ಲಿ  ಕಛೇರಿಯ ಆವರಣದೊಳಗೆ  ನೆಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ್ ರವರು ಈ ಸಂದರ್ಭದಲ್ಲಿ  ಮಾತನಾಡಿ ಕಳೆದ  9  ವರ್ಷಗಳಿಂದ ನಿರಂತರವಾಗಿ ಗೃಹರಕ್ಷಕದಳದ ವತಿಯಿಂದ ರೆಡ್ ಕ್ರಾಸ್ ದಿನದಂದು ನಗರದೆಲ್ಲೆಡೆ ಗಿಡನೆಟ್ಟು ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ನೀಡುತ್ತಿದ್ದೇವೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ‘ಪ್ರತಿ ಗೃಹರಕ್ಷಕರಿಗೆ ಒಂದು ಗಿಡ’ ಎಂಬ ಧ್ಯೇಯವಾಕ್ಯದೊಂದಿಗೆ ಪರಿಸರ ಉಳಿಸಿ, ನಾಡು ಉಳಿಸುವ ಮಹತ್‍ಕಾರ್ಯವನ್ನು ಸದ್ದಿಲ್ಲದೆ ಮಾಡುತ್ತಿದೆ. ಮಾಧವ  ಉಳ್ಳಾಲ ಅವರು ಈ ಕಾರ್ಯಕ್ಕೆ ಬೆನ್ನೆಲುಬಾಗಿ  ನಿಂತಿದ್ದಾರೆ ಎಂದು ನುಡಿದರು.


ಈ ಸಂದರ್ಭದಲ್ಲಿ  ಖ್ಯಾತ ಪರಿಸರವಾದಿ ಕ್ರಷ್ಣಪ್ಪ, ರಾಮಚಂದ್ರ ಭಟ್,ಕಛೇರಿ ಅಧೀಕ್ಷಕ ಗೋಪಿನಾಥ್, ತರಬೇತುದಾರ ಮಹೇಶ್, ಮಂಗಳೂರು ಘಟಕದ ಜೀವನ್ ರಾಜ್, ಜ್ಞಾನೇಶ್, ನಿಶಾ, ಚಂದ್ರಶೇಖರ್,ಉಳ್ಳಾಲ ಘಟಕದ ಸುನಿಲ್, ಸಂತೋಷ್, ದಿವಾಕರ್ ಮುಂತಾದವರು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top