ಮೈಸೂರು: ಮಂಗಳೂರು ವಿಶ್ವವಿದ್ಯಾನಿಲಯ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳಗಂಗೋತ್ರಿ ಕೊಣಾಜೆ ಇದರ ಸಮಾಜ ಕಾರ್ಯ ಗ್ರಾಮೀಣ ಅಧ್ಯಯನ ಶಿಬಿರವು "ಕಡಲ ಮಕ್ಕಳ ಚಿತ್ತ ಹಾಡಿಯತ್ತ" ಎಂಬ ಶೀರ್ಷಿಕೆಯಡಿಯಲ್ಲಿ ಬಸವನಗಿರಿ ಹಾಡಿಯ ಸರ್ಕಾರಿ ಬುಡಕಟ್ಟು ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಬುಧವಾರದಂದು ಉದ್ಘಾಟನೆಗೊಂಡಿತ್ತು. ಮೂರನೇ ದಿನದ ಶಿಬಿರದಲ್ಲಿ ಶಿಬಿರಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೊಡಗು ವಿಶ್ವವಿದ್ಯಾನಿಲಯ ಸಮಾಜ ಕಾರ್ಯ ವಿಭಾಗದ ಅತಿಥಿ ಉಪನ್ಯಾಸಕ ಲೋಕೇಶ್ ಭರಣಿ ವಿದ್ಯಾರ್ಥಿಗಳಿಗೆ "ಭಾಗವಹಿಸುವಿಕೆ ಗ್ರಾಮೀಣ ಮೌಲ್ಯಮಾಪನ" (ಪಿ.ಆರ್.ಎ)ವಿಷಯದ ಬಗ್ಗೆ ಉಪನ್ಯಾಸವನ್ನು ನೀಡಿದರು.
ಉಪನ್ಯಾಸದಲ್ಲಿ ವಾಲ್ಮೀಕಿ ಆಶ್ರಮ ಶಾಲೆ ಬಸವನಗಿರಿ ಇದರ ಮಾಜಿ ಹಿಂದಿ ಶಿಕ್ಷಕ ಉಮೇಶ, ಮಂಗಳೂರು ವಿವಿ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ಡಾ.ಉಷಾರಾಣಿ, ಉಪನ್ಯಾಸಕ ಡಾ.ಶರತ್ ಕುಮಾರ್ ಹಾಗೂ ಸಂಶೋಧನ ವಿದ್ಯಾರ್ಥಿ ಪ್ರಜ್ವಲ್ ಉಪಸ್ಥಿತರಿದ್ದರು. ಶಿಬಿರಾರ್ಥಿ ಮೇಘ ಮೈಕಲ್ ಸ್ವಾಗತಿಸಿ, ರಕ್ಷಿತಾ ವಂದಿಸಿದರು. ನಾಗಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ